ಸುಮಲತಾ-ನಿಖಿಲ್ ಕುಮಾರಸ್ವಾಮಿ 
ರಾಜಕೀಯ

ಸುಮಲತಾಗೆ ಬಿಜೆಪಿ ಬಹಿರಂಗ ಬೆಂಬಲ: ಇದಕ್ಕೆ ಸುಮಕ್ಕ ಹಾಗೂ ಎದುರಾಳಿ ನಿಖಿಲ್ ಹೇಳಿದ್ದೇನು?

ಮಂಡ್ಯ ಲೋಕಸಭಾ ಚುನಾವಣೆ ಕಾವು ಇದೀಗ ಜೋರಾಗಿದೆ. ಹೌದು ಪಕ್ಷೇತ್ತರ ಅಭ್ಯರ್ಥಿಯಾಗಿ ಮಂಡ್ಯ ಲೋಕಸಭಾ ಅಖಾಡಕ್ಕೆ ಧುಮುಕಿರುವ ಸುಮಲತಾ ಅಂಬರೀಶ್ ಅವರಿಗೆ ಬಿಜೆಪಿ ಬಹಿರಂಗವಾಗಿ...

ಮಂಡ್ಯ: ಮಂಡ್ಯ ಲೋಕಸಭಾ ಚುನಾವಣೆ ಕಾವು ಇದೀಗ ಜೋರಾಗಿದೆ. ಹೌದು ಪಕ್ಷೇತ್ತರ ಅಭ್ಯರ್ಥಿಯಾಗಿ ಮಂಡ್ಯ ಲೋಕಸಭಾ ಅಖಾಡಕ್ಕೆ ಧುಮುಕಿರುವ ಸುಮಲತಾ ಅಂಬರೀಶ್ ಅವರಿಗೆ ಬಿಜೆಪಿ ಬಹಿರಂಗವಾಗಿ ಬೆಂಬಲ ಸೂಚಿಸಿದ್ದು ಇದು ಜೆಡಿಎಸ್ ಪಕ್ಷದಲ್ಲಿ ಆತಂಕಕ್ಕೆ ಕಾರಣವಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು, ದೊಡ್ಡ ಮಟ್ಟದಲ್ಲಿ ನನ್ನನ್ನು ಸೋಲಿಸಲು ಒಂದಷ್ಟು ಶಕ್ತಿಗಳು ಪಣ ತೊಟ್ಟಿವೆ. ಇದನ್ನು ಜನತೆ ಸೂಕ್ಷ್ಮವಾಗಿ ಗಮನಿಸುತ್ತಿದೆ. ಜನ ನನ್ನ ಪರವಾಗಿ ನಿಲ್ಲುತ್ತಾರೆ ಎಂಬ ವಿಶ್ವಾಸ ನನಗಿದೆ. ಇದು ಚುನಾವಣೆಯಲ್ಲಿ ನಿರ್ಧಾರವಾಗುತ್ತದೆ ಎಂದು ಹೇಳಿದ್ದಾರೆ.
ಬಿಜೆಪಿಯಿಂದ ಅಧಿಕೃತವಾಗಿ ಬೆಂಬಲ ಘೋಷಣೆ ಆಗಿರುವುದು ನನಗೆ ಮತ್ತಷ್ಟು ಬಲ ಹೆಚ್ಚಿಸಿದೆ. ಬಿಜೆಪಿ ಮುಖಂಡರನ್ನು ಭೇಟಿ ಮಾಡಿ ಧನ್ಯವಾದ ಸಲ್ಲಿಸುತ್ತೇನೆ ಎಂದು ಸುಮಲತಾ ಹೇಳಿದ್ದಾರೆ.
ನನ್ನನ್ನು ಯಾರೂ ನೇರವಾಗಿ ಭೇಟಿ ಮಾಡಿರಲಿಲ್ಲ. ಫೋನ್ ನಲ್ಲೂ ಹೇಳಿರಲಿಲ್ಲ. ಅಂಬರೀಶ್ ಅವರ ಮೇಲಿನ ಗೌರವದಿಂದ ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ನನಗೆ ಬೆಂಬಲ ಸೂಚಿಸಿರುವುದು ನಿಜಕ್ಕೂ ತುಂಬಾ ಸಂತೋಷವಾಗಿದೆ. ನನ್ನ ಮನಸಿನಲ್ಲೂ ಬಿಜೆಪಿ ಬೆಂಬಲ ನೀಡಲಿ ಎಂದಿತ್ತು. ಈಗ ನನಗೆ ಮತ್ತಷ್ಟು ಶಕ್ತಿ ಬಂದಂತಾಯಿತು ಎಂದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT