ಬಿ ಎಸ್ ಯಡಿಯೂರಪ್ಪ 
ರಾಜಕೀಯ

ನಾವು ವಶಪಡಿಸಿಕೊಂಡ ದಾಖಲೆಗಳಲ್ಲಿ ಯಡಿಯೂರಪ್ಪನವರ ಹಣ ಪಾವತಿ ಬಗ್ಗೆ ಪ್ರಸ್ತಾಪವಿಲ್ಲ; ಐಟಿ ಇಲಾಖೆ ಸ್ಪಷ್ಟನೆ

ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪನವರು ಬರೆದಿದ್ದರೆನ್ನಲಾದ ಡೈರಿಯಲ್ಲಿನ ಪುಟಗಳು ...

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪನವರು ಬರೆದಿದ್ದರೆನ್ನಲಾದ ಡೈರಿಯಲ್ಲಿನ ಪುಟಗಳು ಆದಾಯ ತೆರಿಗೆ ಇಲಾಖೆ ವಶಪಡಿಸಿಕೊಂಡ ದಾಖಲೆಗಳಲ್ಲಿ ಇರಲಿಲ್ಲ ಎಂದು ಆದಾಯ ತೆರಿಗೆ ಇಲಾಖೆ ಸ್ಪಷ್ಟನೆ ನೀಡಿದೆ.
ಕರ್ನಾಟಕ ಮತ್ತು ಗೋವಾ ಭಾಗದ ಆದಾಯ ತೆರಿಗೆ ಇಲಾಖೆಯ ಸಾಧನೆಗಳ ಬಗ್ಗೆ ತಿಳಿಸಲು ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇಲಾಖೆಯ ಮುಖ್ಯ ಚುನಾವಣಾ ಆಯುಕ್ತ ಬಿ ಆರ್ ಬಾಲಕೃಷ್ಣ, ಸುದ್ದಿ ಮ್ಯಾಗಜೀನ್ ವೊಂದು ವರದಿ ಮಾಡಿರುವ ಯಡಿಯೂರಪ್ಪನವರ ಡೈರಿಯಲ್ಲಿ ಸಿಕ್ಕಿದ ಮೊದಲ ಪುಟ ಎಂದು ಹೇಳುವ ಭಾಗ ನಾವು ವಶಪಡಿಸಿಕೊಂಡ ದಾಖಲೆಗಳಲ್ಲಿ ಇರಲಿಲ್ಲ. ಮತ್ತೊಂದು ತನಿಖೆ ಮೇಲೆ ಪ್ರಭಾವ ಬೀರಲು ಮಾಡುತ್ತಿರುವ ಪ್ರಯತ್ನವಿದು ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದ್ದು ನಾವು ಪ್ರಭಾವ, ಆಮಿಶಗಳಿಗೆ ಬಲಿಯಾಗುವುದಿಲ್ಲ ಎಂದಿದ್ದಾರೆ.
ಸುದ್ದಿಯಲ್ಲಿ ಉಲ್ಲೇಖಿಸಿರುವ ಡೈರಿಯ ಬೇರೆ ಪುಟಗಳು ಇಲಾಖೆ ವಶಪಡಿಸಿಕೊಂಡ ದಾಖಲೆಯ ಭಾಗವಾಗಿದೆ, ಅವು ನಕಲಿಯಾಗಿರಬಹುದು,ಮೂಲ ಡೈರಿಯ ಪುಟವಾಗಿರಲಿಕ್ಕಿಲ್ಲ ಎಂದು ಅನಿಸುತ್ತದೆ, ಅದು ನಕಲಿ ಎಂಬುದು ನಮ್ಮ ತೀರ್ಮಾನವಾಗಿದೆ ಎಂದು ಬಾಲಕೃಷ್ಣ ಹೇಳಿದರು.
ಇಲಾಖೆ ವಶಪಡಿಸಿಕೊಂಡಿರುವ ಡೈರಿಯ ಪುಟಗಳನ್ನು ನೋಡಿದರೆ ಅದು ದಿನನಿತ್ಯ ಬರೆದ ವಿಷಯಗಳಂತೆ ಕಾಣಿಸುತ್ತಿಲ್ಲ, ಇದು ಅಸಲಿ ಡೈರಿಯ ಪುಟಗಳೆಂದು ತೆರಿಗೆ ಇಲಾಖೆಗೆ ಒದಗಿಸಿ ಆ ಮೂಲಕ ಬಿಡುಗಡೆ ಮಾಡಿಸಬೇಕೆಂದು ಯೋಜನೆ ರೂಪಿಸಿದಂತೆ ಕಾಣಿಸುತ್ತದೆ, ಡೈರಿಯನ್ನು ಪ್ರತ್ಯೇಕವಾಗಿ ಸ್ವತಂತ್ರವಾಗಿ ಬಿಡುಗಡೆ ಮಾಡಿದರೆ ಅದರ ಪರಿಣಾಮ ಅಷ್ಟೊಂದು ಇರುವುದಿಲ್ಲ ಎಂಬ ಯೋಜನೆಯಿದ್ದಿರಬಹುದು ಎಂದರು ಅಧಿಕಾರಿ ಬಾಲಕೃಷ್ಣ.
ಕಳೆದ ಶುಕ್ರವಾರ ಕೇಂದ್ರ ನೇರ ತೆರಿಗೆ ಮಂಡಳಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ಆಸ್ತಿ-ಪಾಸ್ತಿ ಶೋಧ ಕಾರ್ಯಾಚರಣೆ ವೇಳೆ ಸಿಕ್ಕಿರುವ ಕೆಲವು ಪುಟಗಳು ಬಿ ಎಸ್ ಯಡಿಯೂರಪ್ಪನವರು ಬರೆದಿದ್ದಾರೆ ಎನ್ನಲಾದ ಡೈರಿಯ ಕ್ಸೆರಾಕ್ಸ್ ಪ್ರತಿಗಳಾಗಿವೆ. ವಿಧಿ ವಿಜ್ಞಾನ ಪ್ರಯೋಗಾಲಯ ಮೂಲ ದಾಖಲೆಗಳನ್ನು ಕೇಳಿದ್ದು ಅವು ಸಿಗದ ಕಾರಣ ಪೇಜ್ ಗಳನ್ನು ಪರಿಶೀಲಿಸಲಿಲ್ಲ ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT