ಸಾಂದರ್ಭಿಕ ಚಿತ್ರ 
ರಾಜಕೀಯ

ಲೋಕಸಭೆ ಚುನಾವಣೆ ವೇಳೆ 46 ಐಟಿ ರೇಡ್: 39 ಕಾಂಗ್ರೆಸ್-ಜೆಡಿಎಸ್ ನಾಯಕರೇ ಟಾರ್ಗೆಟ್ !

ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆ ವೇಳೆ ಆದಾಯ ತೆರಿಗೆ ಇಲಾಖೆ ರಾಜ್ಯದ ಹಲವು ಭಾಗಗಳಲ್ಲಿ ದಾಳಿ ನಡೆಸಿತ್ತು. ಆದರೆ ಚುನಾವಣೆ ವೇಳೆ ನಡೆದ ...

ಬೆಂಗಳೂರು: ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆ ವೇಳೆ ಆದಾಯ ತೆರಿಗೆ ಇಲಾಖೆ ರಾಜ್ಯದ ಹಲವು ಭಾಗಗಳಲ್ಲಿ ದಾಳಿ ನಡೆಸಿತ್ತು.ಆದರೆ ಚುನಾವಣೆ ವೇಳೆ ನಡೆದ ದಾಳಿಯಿಂದಾಗಿ ಆದಾಯ ತೆರಿಗೆ ಇಲಾಖೆ ಕಾರ್ಯಕ್ಕೆ ಭಾರೀ ಪ್ರಮಾಣದಲ್ಲಿ ಟೀಕೆಗಳು ವ್ಯಕ್ತವಾದವು.
ಐಟಿ ದಾಳಿ ವೇಳೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರುಗಳನ್ನು ಟಾರ್ಗೆಟ್ ಮಾಡಲಾಗಿದೆ ಎಂಬ ಆರೋಪಗಳು ಕೇಳಿ ಬಂದಿದ್ದವು, 2019ರಲ್ಲಿ ಅಂದರೆ ಲೋಕಸಭೆ ಚುನಾವಣೆ ವೇಳೆ 46 ಐಟಿ ದಾಳಿಗಳು ನಡೆದಿದ್ದವು, ಅದರಲ್ಲಿ  36 ದಾಳಿಗಳು ಕಾಂಗ್ರೆಸ್  ಮತ್ತು ಜೆಡಿಎಸ್ ನಾಯಕರುಗಳ ಮನೆ ಮೇಲೆ ನಡೆದಿತ್ತು.
2018ರ ವಿಧಾನಸಭೆ ಚುನಾವಣೆ ವೇಳೆ 34 ದಾಳಿಗಳು ನಡೆದಿದ್ದವು, ಆಗಲೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರೇ ಟಾರ್ಗೆಟ್ ಆಗಿದ್ದರು. ಆದರೆ 2014ರ ಚುನಾವಣೆ ವೇಳೆ ಯಾವುದೇ ರೇಡ್ ಗಳು ನಡೆದಿರಲಿಲ್ಲ, 
ಆಡಳಿತ ಪಕ್ಷ ಜನರ ಮನಸಲ್ಲಿ ಭಯ ಮೂಡಿಸುವ  ತಂತ್ರ ಇದಾಗಿದೆ, ಐಟಿ, ಇಡಿ, ಮತ್ತು ಸಿಬಿಐ ಮುಂತಾದ ಏಜೆನ್ಸಿಗಳನ್ನು ಕೇಂದ್ರ ಸರ್ಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಕೇಂದ್ರ ಮಾಜಿ ಸಚಿವ ಕಪಿಲ್ ಸಿಬಲ್ ಹೇಳಿದ್ದಾರೆ. 2018ರ ವಿಧಾನಸಭೆ ಚುನಾವಣೆ ವೇಳೆ ಹಾಗೂ ನಂತರದಲ್ಲಿ ಸಚಿವ ಡಿ,ಕೆ ಶಿವಕುಮಾರ್ ಮನೆ ಮೇಲೆ ಐಟಿ ದಾಳಿಯಾಗಿತ್ತು,
ಐಟಿ ದಾಳಿಯ ವಿಷಯವನ್ನು ಕಾಂಗ್ರೆಸ್ ಮತ್ತು ಜೆಡಿಎಸ್  ಪಕ್ಷಗಳು ರಾಜಕೀಯಗೊಳಿಸುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT