ಸತೀಶ್ ಜಾರಕಿಹೊಳಿ 
ರಾಜಕೀಯ

ಲೋಕಸಭಾ ಚುನಾವಣೆ: ಕೆಲವೆಡೆ ಮೈತ್ರಿ ಧರ್ಮ ಪಾಲನೆ ಆಗಿಲ್ಲ: ಸತೀಶ್ ಜಾರಕಿಹೊಳಿ

ಲೋಕಸಭಾ ಚುನಾವಣೆ ವೇಳೆ ಹಲವೆಡೆ ಮೈತ್ರಿ ಧರ್ಮ ಪಾಲನೆ ಆಗಿಲ್ಲ ,ಮುಂದೆ ಸರಿಪಡಿಸುವ ಕೆಲಸ ಮಾಡಬೇಕಾಗಿದೆ ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಬೆಳಗಾವಿ: ಲೋಕಸಭಾ ಚುನಾವಣೆ ವೇಳೆ ಹಲವೆಡೆ ಮೈತ್ರಿ ಧರ್ಮ ಪಾಲನೆ ಆಗಿಲ್ಲ ,ಮುಂದೆ ಸರಿಪಡಿಸುವ ಕೆಲಸ ಮಾಡಬೇಕಾಗಿದೆ  ಎಂದು ಅರಣ್ಯ  ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ವೇಳೆ ಕೆಲವು ಕ್ಷೇತ್ರಗಳಲ್ಲಿ ಮೈತ್ರಿ ಧರ್ಮ ಪಾಲನೆ ಮಾಡಿಲ್ಲ.ಅಂತಹ ಕ್ಷೇತ್ರಗಳನ್ನ ಗುರುತಿಸಿ ಮುಂದಿನ ದಿನದಲ್ಲಿ ಸರಿಪಡಿಸುವ ಕೆಲಸ ಮಾಡಬೇಕು. ಇದರಿಂದಾಗಿ ಸಮ್ಮಿಶ್ರ ಸರ್ಕಾರದ ಮೇಲೆ ಪರಿಣಾಮ ಬೀರುವುದಿಲ್ಲ ಎಂದರು.
ಚಿಂಚೋಳಿ, ಕುಂದಗೋಳ ಉಪ ಚುನಾವಣೆಯಲ್ಲಿ ಗೆಲ್ಲಲು ಅಗತ್ಯ ತಂತ್ರಗಾರಿಕೆ ಮಾಡಲಾಗಿದೆ. ಕುಂದಗೋಳದ ಉಸ್ತುವಾರಿಯನ್ನು ಡಿಕೆ ಶಿವಕುಮಾರ್‌ಗೆ ನೀಡಬಾದರು ಎಂದು ತಾವು ಹೇಳಿಲ್ಲ. ಯಾರೇ‌ ಉಸ್ತುವಾರಿ ಇರಲಿ ಪಕ್ಷದ ಅಭ್ಯರ್ಥಿ ಗೆಲವು ಮುಖ್ಯ. ಶಿವಕುಮಾರ್ ವಿರುದ್ಧ ತಾವು ಎಲ್ಲಿಯೂ ಅಸಮಾಧಾನ ವ್ಯಕ್ತಪಡಿಸಿಲ್ಲ ಎಂದರು. 
ಕೆಲ ದಿನಗಳಲ್ಲಿ ಹಾಲಿ ಸಚಿವರುಗಳು ಮಾಜಿಗಳಾಗಲಿದ್ದಾರೆ ಎಂಬ ರಮೇಶ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ತಾವು ಎಂದೂ ಅಧಿಕಾರವನ್ನು ದುರುಪಯೋಗ  ಮಾಡಿಕೊಂಡಿಲ್ಲ.ಕಾರಿಗೆ ಕೆಂಪು ಲೈಟು ತೆಗೆದು ತುಂಬಾ ದಿನಗಳು ಕಳೆದಿವೆ. ರಮೇಶನಿಗೆ ಕೆಂಪು ಲೈಟು, ಅಧಿಕಾರದ ಬಗ್ಗೆ ಗೊತ್ತಿಲ್ಲ. ಕುಮಾರಸ್ವಾಮಿ ಅವರು ರಮೇಶ್ ಜಾರಕಿಹೊಳಿ ಅವರೊಂದಿಗೆ ಸಂಧಾನ ನಡೆಸಿದ್ದಾರೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

IPL 2026: ಹೈದರಾಬಾದ್ ನೀಡಿದ 220 ರನ್ ಟಾರ್ಗೆಟ್ ಬೆನ್ನತ್ತಿ ಗೆದ್ದ ಪಂಜಾಬ್ ಕಿಂಗ್ಸ್!

SCROLL FOR NEXT