ಬಿಜೆಪಿ ಮುಖಂಡರು 
ರಾಜಕೀಯ

ಕುಂದಗೋಳ ಉಪಚುನಾವಣೆ: ಲಿಂಗಾಯತ ಮತಗಳ ಮೇಲೆ ಯಡಿಯೂರಪ್ಪ ಕಣ್ಣು

ಕುಂದಗೋಳ ಹಾಗೂ ಚಿಂಚೋಳ್ಳಿ ವಿಧಾನಸಭಾ ಉಪ ಚುನಾವಣೆಯಲ್ಲಿ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ರಣತಂತ್ರ ರೂಪಿಸುತ್ತಿದ್ದಾರೆ.

ಬೆಂಗಳೂರು:  ಕುಂದಗೋಳ ಹಾಗೂ ಚಿಂಚೋಳ್ಳಿ ವಿಧಾನಸಭಾ ಉಪ ಚುನಾವಣೆಯಲ್ಲಿ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ರಣತಂತ್ರ ರೂಪಿಸುತ್ತಿದ್ದಾರೆ.
ಕ್ಷೇತ್ರದಲ್ಲಿನ ಲಿಂಗಾಯತ ಮತಗಳ ಮೇಲೆ ಕಣ್ಣಿಟ್ಟಿರುವ ಯಡಿಯೂರಪ್ಪ ಮುಂದಿನ 10 ದಿನಗಳ ಕಾಲ ಎರಡು ಕ್ಷೇತ್ರಗಳಿಗೂ ಮೂರು ಭಾರಿ ಭೇಟಿ ನೀಡಲಿದ್ದಾರೆ.
.2018ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 634 ಮತಗಳ ಅಂತರದಲ್ಲಿ ಕ್ಷೇತ್ರ ಕಳೆದುಕೊಂಡಿದ್ದ ಬಿಜೆಪಿ ಉಪಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸದಲ್ಲಿದೆ.ಜನರ ಒಲವು ನಮ್ಮ ಪರವಾಗಿದೆ.2018ರ ಚುನಾವಣೆಯಲ್ಲಿ ಕೆಲವು ಲೋಪಗಳಿಂದಾಗಿ ಕ್ಷೇತ್ರ ಕಳೆದುಕೊಂಡಿದ್ದೇವು. ಆದರೆ, ಈ ಬಾರಿ ಅನುಮಾನವಿಲ್ಲ,ಲಿಂಗಾಯತ ಮತಗಳು ಬಿಜೆಪಿ ಗೆಲುವಿಗೆ ನೆರವಾಗಲಿವೆ ಎಂಬ ವಿಶ್ವಾಸ ಇರುವುದಾಗಿ ಯಡಿಯೂರಪ್ಪ ಹೇಳಿದ್ದಾರೆ.
ಚುನಾವಣೆ ಹತ್ತಿರ ಇರುವಂತೆಯೇ ಯಡಿಯೂರಪ್ಪ ಮೇ 14ರಂದು ಕುಂದಗೋಳಕ್ಕೆ ಮತ್ತೆ ಆಗಮಿಸಲಿದ್ದು, ಮತ್ತೊಂದು ಸುತ್ತಿನ ಪ್ರಚಾರ ನಡೆಸಲಿದ್ದಾರೆ. ಈ ಕ್ಷೇತ್ರದಲ್ಲಿ ಮರಾಠ ಹಾಗೂ ಲಿಂಗಾಯತ ಮತಗಳು ಬಿಜೆಪಿಯ ಸಾಂಪ್ರದಾಯಿಕ ಮತಗಳಾಗಿವೆ. ಆದರೆ, ಆ ಮತಗಳನ್ನು ವಿಭಜಿಸಿ ಕಾಂಗ್ರೆಸ್ ಅಭ್ಯರ್ಥಿಗೆ ಯಾರು ವರ್ಗಾವಣೆ ಮಾಡಲಿದ್ದಾರೆ ಎಂಬುದರ ಬಗ್ಗೆ ನಮಗೆ ಅನುಕೂಲವಾಗಲಿದೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಹೇಳಿದ್ದಾರೆ.
ಮೇ 19 ರಂದು ಕುಂದಗೋಳ ಹಾಗೂ ಚಿಂಚೋಳಿ ವಿಧಾನಸಭಾ ಉಪಚುನಾವಣೆ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT