ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ 
ರಾಜಕೀಯ

ರಾಜೀವ್ ಗಾಂಧಿ ಕುರಿತ ಹೇಳಿಕೆ ಮೋದಿಯವರ ಮನಸ್ಥಿತಿ ತೋರಿಸುತ್ತದೆ: ಎಚ್ ಡಿ ಕುಮಾರಸ್ವಾಮಿ

ರಾಜೀವ್ ಗಾಂಧಿ ಭ್ರಷ್ಟಾಚಾರಿ ನಂಬರ್ 1 ಆಗಿಯೇ ಮೃತಪಟ್ಟರು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ.

ಬೆಂಗಳೂರು:  ರಾಜೀವ್ ಗಾಂಧಿ ಭ್ರಷ್ಟಾಚಾರಿ ನಂಬರ್ 1 ಆಗಿಯೇ ಮೃತಪಟ್ಟರು ಎಂಬ   ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ.
ನರೇಂದ್ರ ಮೋದಿ ಅವರ ಹೇಳಿಕೆ ದ್ವೇಷಕಾರಕ, ಖಂಡನೀಯವಾಗಿದ್ದು, ಇದು ಪ್ರಧಾನಿ ಅವರ ಮನಸ್ಥಿತಿಯನ್ನು ತೋರಿಸುತ್ತದೆ. ಅವರ ಹೇಳಿಕೆಯಲ್ಲಿ ಭಯ ಹಾಗೂ ಹತಾಶೆ ಕಾಣುತ್ತಿರುವುದು ಸ್ಪಷ್ಟ ಎಂದಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೂಡಾ  ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಉತ್ತರ  ಪ್ರದೇಶದ ಚುನಾವಣಾ ಪ್ರಚಾರ ಸಭೆಯೊಂದರಲ್ಲಿ ರಾಹುಲ್ ಗಾಂಧಿ ಅವರನ್ನು ಟೀಕಿಸುವ ಭರದಲ್ಲಿ  ಮೋದಿ ಅವರು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ತೀವ್ರವಾಗಿ ಟೀಕಿಸಿದ್ದರು.
ನಿಮ್ಮ ತಂದೆ ರಾಜೀವ್ ಗಾಂಧಿಗೆ   ಅವರ ಹೊಗಳುಭಟ್ಟರು ಮಿಸ್ಟರ್ ಕ್ಲೀನ್ ಎಂದು ಬಣ್ಣಿಸಿರಬಹುದು ಆದರೆ, ರಾಜೀವ್ ಗಾಂಧಿ ಭ್ರಷ್ಟಾಚಾರಿ ನಂಬರ್ 1 ಆಗಿಯೇ ಮೃತಪಟ್ಟರು. ಈ ಮೋದಿ ಬಾಯಿಯಿಲ್ಲಿ ಚಮಚ ಇರಿಸಿಕೊಂಡು ಹುಟ್ಟಿದವನಲ್ಲ ಎಂದು ನಾಮ್ ಧಾರ್ ಗಮನಿಸಬೇಕು ಎಂದು ಮೋದಿ ಹೇಳಿಕೆ ನೀಡಿದ್ದರು.
ಈ ಹೇಳಿಕೆಗೆ ಕಾಂಗ್ರೆಸ್ ಪಕ್ಷದಿಂದ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT