ರಾಜಕೀಯ

ಲೋಕಸಭೆ ಫಲಿತಾಂಶದ ನಂತರ ಬಿ.ಎಲ್ ಸಂತೋಷ್ ಬಿಜೆಪಿ ರಾಜ್ಯಾಧ್ಯಕ್ಷ: ಬಿಎಸ್ ವೈ-ಶೋಭಾ ಮೂಲೆಗುಂಪು- ಬೇಳೂರು

Shilpa D
ಶಿವಮೊಗ್ಗ: ಲೋಕಸಭಾ ಚುನಾವಣೆ ಫಲಿತಾಂಶ ಬಂದ ಮೇಲೆ ಬಿ.ಎಸ್.ಯಡಿಯೂರಪ್ಪ ಅವರನ್ನು ಮೂಲೆಗೆ ಸರಿಸಿ, ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ರನ್ನು ಕೂರಿಸಲಾಗುತ್ತದೆ ಎಂದು ಕಾಂಗ್ರೆಸ್ ಮುಖಂಡ ಬೇಳೂರು ಗೋಪಾಲಕೃಷ್ಣ  ಹೇಳಿದ್ದಾರೆ.
ಈ ಬಗ್ಗೆ ಈಗಾಗಲೇ ಬಿಜೆಪಿಯ ಕೇಂದ್ರ ನಾಯಕರು ಸುಳಿವು ನೀಡಿದ್ದಾರೆ. ಹೈ ಕಮಾಂಡ್ ಮಟ್ಟದಲ್ಲಿ ಸಂತೋಷ್ ಅವರಿಗೆ ಪ್ರಭಾವ ಇದ್ದು, ಅವರೇ ಕರ್ನಾಟಕದಲ್ಲಿ ಚುಕ್ಕಾಣಿ ಹಿಡಿಯಲಿದ್ದಾರೆ ಎಂದು ತಿಳಿಸಿದ್ದಾರೆ.
ಯಡಿಯೂರಪ್ಪ ಅವರ ಶಕ್ತಿ ಕುಂದುತ್ತಿದ್ದಂತೆಯೇ ಶೋಭಾ ಕರಂದ್ಲಾಜೆ ಅವರ ಆಟ ಮುಗಿಯುತ್ತದೆ. ಉಮೇಶ್ ಕತ್ತಿ, ಸೋಮಣ್ಣ, ಶೋಭಾ ಕರಂದ್ಲಾಜೆ ಹಾಗೂ ಆಯನೂರು ಮಂಜುನಾಥ್ ಅವರೆಲ್ಲ ಸರ್ಕಾರ ಬೀಳುತ್ತದೆ ಎಂಬ ಭ್ರಮೆಯಲ್ಲಿ ಇದ್ದಾರೆ ಎಂದು ಲೇವಡಿ ಮಾಡಿದ್ದಾರೆ.
SCROLL FOR NEXT