ಮಲ್ಲಿಕಾರ್ಜುನ ಖರ್ಗೆ ಮತ್ತು ಉಮೇಶ್ ಜಾಧವ್ 
ರಾಜಕೀಯ

ಕಾವೇರಿದ ಚಿಂಚೋಳಿ ಕ್ಷೇತ್ರ: ಜಾಧವ್ ವಿರುದ್ಧ ಖರ್ಗೆಧ್ವಯರ ವಾಗ್ದಾಳಿ

: ಸಂಸದ ಮಲ್ಲಿಕಾರ್ಜುನ ಖರ್ಗೆ ಮತ್ತು ಡಾ.ಉಮೇಶ್ ಜಾಧವ್ ಅವರ ನಡುವಿನ ವಾಕ್ಸಮರ ಚುನಾವಣೆ ಫಲಿತಾಂಶ ಬರುವವರೆಗೂ ನಿಲ್ಲುವಂತೆ ಕಾಣುತ್ತಿಲ್ಲ, ..

ಚಿಂಚೋಳಿ: ಸಂಸದ ಮಲ್ಲಿಕಾರ್ಜುನ ಖರ್ಗೆ ಮತ್ತು ಡಾ.ಉಮೇಶ್ ಜಾಧವ್ ಅವರ ನಡುವಿನ ವಾಕ್ಸಮರ ಚುನಾವಣೆ ಫಲಿತಾಂಶ ಬರುವವರೆಗೂ ನಿಲ್ಲುವಂತೆ ಕಾಣುತ್ತಿಲ್ಲ, ಲೋಕ ಸಮರದ ನಂತರ ಇಬ್ಬರು ನಾಯಕರುಗಳು ಚಿಂಚೋಳಿ ವಿಧಾನಸಭೆ ಉಪ ಚುನಾವಣೆಯಲ್ಲಿ ಮತ್ತು ವಾಗ್ಯುದ್ಧ ಮುಂದುವರಿಸಿದ್ದಾರೆ.
ಚಿಂಚೋಳಿ ಶಾಸಕರಾಗಿದ್ದ ಉಮೇಶ್ ಜಾಝವ್, ಕಾಂಗ್ರೆಸ್ ಪಕ್ಷ ತೊರೆದು ಕಲಬುರಗಿ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನಿಂದ ಸ್ಪರ್ಧಿಸಿದ್ದರು. ತೆರವಾಗಿರುವ ಚಿಂಚೋಳಿ ಕ್ಷೇತ್ರದ ವಿಧಾನಸಭೆ ಉಪ ಚುನಾವಣೆಯಲ್ಲಿ ತಮ್ಮ ಪುತ್ರ ಅವಿನಾಶ್ ಜಾಧವ್ ನನ್ನು ಕಣಕ್ಕಿಳಿಸಿದ್ದಾರೆ.
ಚಿಂಚೋಳಿ ವಿಧಾನವಭೆ ಕ್ಷೇತ್ರ ಕಲಬುರಗಿ ಲೋಕಸಭೆ ವ್ಯಾಪ್ತಿಯಲ್ಲಿ ಬರುತ್ತದೆ. ಇದು ಮಲ್ಲಿಕಾರ್ಜುನ ಖರ್ಗೆ ಮತ್ತು ಪುತ್ರ ಪ್ರಿಯಾಂಕ್ ಗೆ ಪ್ರತಿಷ್ಠೆಯ ವಿಷಯವಾಗಿದೆ.
ಉಮೇಶ್ ಜಾಧವ್ ಪುತ್ರ ಅವಿನಾಶ್ ಅವರನ್ನು ಸುಲಭವಾಗಿ ಸೋಲಿಸಬಹುದು ಎಂದು ಖರ್ಗೆ ಭಾವಿಸಿದ್ದಾರೆ.ಜಾಧವ್ ಪುತ್ರನನ್ನು ಸೋಲಿಸುವ ಉದ್ದೇಶದಿಂದಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಿಎಂ ಸಿದ್ದರಾಮಯ್ಯಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ.
ಐದು ವರ್ಷ ಜನರ ಸೇವೆ ಮಾಡಲಿದ್ದಾರೆ ಎಂಬ ವಿಶ್ವಾಸದಿಂದ ಜನ ಉಮೇಶ್ ಜಾಧವ್ ಗೆ ಮತ ಹಾಕಿದ್ದರು ಆದರೆ ಆ ಜನರಿಗೆ ಜಾಧವ್ ಮೋಸ ಮಾಡಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ,ಚಿಂಚೋಳಿಯಲ್ಲಿ ಪ್ರವಾಸ ಕೈಗೊಂಡಿರುವ ಪ್ರಿಯಾಂಕ್ ಖರ್ಗೆ, ಸುಭಾಷ್ ರಾಥೋಡ್ ಗೆ ಮತ ಹಾಕುವಂತೆ ಮನವೊಲಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT