ಭವಾನಿ ರೇವಣ್ಣ 
ರಾಜಕೀಯ

ರೋಹಿಣಿ ಸಿಂಧೂರಿಗೆ ಪರೋಕ್ಷ ಟಾಂಗ್: SSLCಯಲ್ಲಿ ಹಾಸನ ನಂ.1 ಆಗಲು ನನ್ನ ಕೊಡುಗೆಯೂ ಇದೆ: ಭವಾನಿ

ನಾನು ಆಯೋಜಿಸಿದ ಹಲವು ಕಾರ್ಯಕ್ರಮಗಳಿಂದಾಗಿ ಹಾಸನದ ಮಕ್ಕಳು ಎಸ್ಎಸ್ಎಲ್ಸಿಯಲ್ಲಿ ನಂಬರ್ ಆಗಲು ಕಾರಣವಾಯಿತು. ನಮ್ಮ ಪ್ರಯತ್ನಕ್ಕೆ ಭಗವಂತ ಉತ್ತಮ ಫಲಿತಾಂಶವನ್ನು ಕೊಟ್ಟಿದ್ದಾನೆ.

ಹಾಸನ: ನಾನು ಆಯೋಜಿಸಿದ ಹಲವು ಕಾರ್ಯಕ್ರಮಗಳಿಂದಾಗಿ ಹಾಸನದ ಮಕ್ಕಳು ಎಸ್ಎಸ್ಎಲ್ಸಿಯಲ್ಲಿ ನಂಬರ್ ಆಗಲು ಕಾರಣವಾಯಿತು. ನಮ್ಮ ಪ್ರಯತ್ನಕ್ಕೆ ಭಗವಂತ ಉತ್ತಮ ಫಲಿತಾಂಶವನ್ನು ಕೊಟ್ಟಿದ್ದಾನೆ ಎಂದು ಸಚಿವ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಹೇಳಿದ್ದಾರೆ.
ಹಾಸನ ನಂಬರ್ ಒನ್ ಆಗಲು ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕಾರಣ ಎಂಬ ಮಾತಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟ ಭವಾನಿ ರೇವಣ್ಣ ಅವರು ಯಾರೇ ಏನೇ ಹೇಳಿಕೊಳ್ಳಲಿ, ಪ್ರಯತ್ನ ಮಾಡಿರೋರಿಗೆ ಗೊತ್ತಿರುತ್ತದೆ ಎಂದು ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ಹೇಳಿದ್ದಾರೆ.
ಹಾಸನ ನಂಬರ್ ಒನ್ ಸ್ಥಾನಕ್ಕೆ ಬಂದಿರುವುದು ಖುಷಿಯಾಗಿದೆ. 31ನೇ ಸ್ಥಾನದಿಂದ 7, ನಂತರ ಈಗ ಮೊದಲ ಸ್ಥಾನ ಬಂದಿದೆ. ಇದಕ್ಕೆ ಕೇವಲ ನಮ್ಮ ಕುಟುಂಬ ವರ್ಗ ಮಾತ್ರ ಕಾರಣವಲ್ಲ. ಶಿಕ್ಷಣ ಇಲಾಖೆ ಹಾಗೂ ಮಕ್ಕಳ ಪ್ರಯತ್ನ ದೊಡ್ಡದು. ನಾನು ಆಯೋಜಿಸಿದ ಕಾರ್ಯಕ್ರಮಗಳಿಂದ ಹಾಸನ ಈ ಮಟ್ಟಕ್ಕೆ ಬರಲು ಸಹಕಾರಿಯಾಯಿತು ಎಂದು ಭವಾನಿ ಸಮರ್ಥಿಸಿಕೊಂಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ. ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Idre Nemdiyaag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT