ಎಂ. ಪಿ. ರೇಣುಕಾಚಾರ್ಯ 
ರಾಜಕೀಯ

ಕುಂದಗೋಳ: ಡಿಕೆ ಶಿವಕುಮಾರ್ ಕಾಂಗ್ರೆಸ್ ನ ಹರಕೆಯ ಕೋಣ- ರೇಣುಕಾಚಾರ್ಯ

ಹಿರಿಯ ಕಾಂಗ್ರೆಸ್ ಮುಖಂಡ ಡಿ. ಕೆ. ಶಿವಕುಮಾರ್ ಕಾಂಗ್ರೆಸ್ ಪಕ್ಷದ ಹರಕೆಯ ಕೋಣ ಎಂದು ಬಿಜೆಪಿ ಶಾಸಕ ಎಂ. ಪಿ. ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

ಕುಂದಗೋಳ: ಚಿಂಚೋಳಿ ಹಾಗೂ ಕುಂದಗೋಳ ವಿಧಾನಸಭಾ ಉಪ ಚುನಾವಣೆಗೆ ಇನ್ನೂ ಒಂದು ವಾರ ಬಾಕಿ ಇರುವಂತೆಯೇ ಪ್ರಚಾರ ತಾರಕಕ್ಕೇರಿದೆ.
ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರು ಉಭಯ ಕ್ಷೇತ್ರಗಳಲ್ಲಿ ತಮ್ಮ  ಅಭ್ಯರ್ಥಿಗಳ ಪರವಾಗಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.
ಕುಂದಗೋಳದಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಿದ ಬಿಜೆಪಿ ಶಾಸಕ ಎಂ. ಪಿ. ರೇಣುಕಾಚಾರ್ಯ ಹಿರಿಯ ಕಾಂಗ್ರೆಸ್ ಮುಖಂಡ ಡಿ. ಕೆ. ಶಿವಕುಮಾರ್  ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಕುಂದಗೋಳದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು  ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್ ಕಾಂಗ್ರೆಸ್ ಪಕ್ಷದ ಹರಕೆಯ ಕುರಿ ಎಂದು ಟೀಕಿಸಿದರು. ಕೋಣವನ್ನು ಬಲಿ  ನೀಡುವ ಮೊದಲು ಎಣ್ಣೆ ಹಚ್ಚುತ್ತೇವೆ. ಡಿ. ಕೆ. ಶಿವಕುಮಾರ್ ಹರಕೆಯ ಕೋಣವಾಗಿದ್ದಾರೆ. ಇಲ್ಲಿ ಬಂದು ಕಣ್ಣೀರಿನ ನಾಟಕ ಮಾಡುತ್ತಾರೆ. ಆ ಕೋಣವನ್ನು ಕಡಿದು ಹಾಕಬೇಕು ಎಂದು ಕಿಡಿಕಾರಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT