ಕೆ ಎಸ್ ಈಶ್ವರಪ್ಪ 
ರಾಜಕೀಯ

ದೇಶ ವಿಭಜಿಸಿದ್ದು ಯಾರು, ಕಾಂಗ್ರೆಸ್ ನಾಯಕರಿಗೆ ಈಶ್ವರಪ್ಪ ಪ್ರಶ್ನೆ

ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದಾಗ ಬಿಜೆಪಿ ಹಾಗೂ ನರೇಂದ್ರ ಮೋದಿಯವರು ಇರಲಿಲ್ಲ.ಆಗ ದೇಶ ...

ಬೆಂಗಳೂರು: ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದಾಗ ಬಿಜೆಪಿ ಹಾಗೂ ನರೇಂದ್ರ ಮೋದಿಯವರು ಇರಲಿಲ್ಲ.ಆಗ ದೇಶ ವಿಭಜನೆ ಮಾಡಿದ್ದು ಯಾರು ಎಂದು ಕಾಂಗ್ರೆಸ್ ನಾಯಕರನ್ನು ಕೆ ಎಸ್ ಈಶ್ವರಪ್ಪ ಪ್ರಶ್ನಿಸಿದ್ದಾರೆ.
ಭಾರತದ ಪ್ರಧಾನ ವಿಭಜಕ ಎಂಬ ಶೀರ್ಷಿಕೆಯಡಿ ಟೈಮ್ ವಾರಪತ್ರಿಕೆ ಪ್ರಕಟಿಸಿರುವ ತಲೆಬುಡವಿಲ್ಲದ ಲೇಖನದ ಬಗ್ಗೆ ಕಾಂಗ್ರೆಸ್ ನಾಯಕರು ಸಂಭ್ರಮಿಸುತ್ತಿರುವ ಪರಿಯನ್ನು ಅವರು ಟ್ವೀಟ್ ಮೂಲಕ ಲೇವಡಿ ಮಾಡಿದ್ದಾರೆ.
ಅಮೆರಿಕಾದ ಟೈಮ್ ನಿಯತಕಾಲಿಕೆ ತನ್ನ ಇತ್ತೀಚಿನ ಸಂಚಿಕೆಯಲ್ಲಿ ಭಾರತದ ಪ್ರಧಾನ ವಿಭಜಕ ಎಂಬ ಶೀರ್ಷಿಕೆಯಡಿ ಲೇಖನ ಪ್ರಕಟಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಅಲ್ಪಸಂಖ್ಯಾತರ ಬಗ್ಗೆ ತಾರತಮ್ಯ ಮಾಡುತ್ತಿದ್ದಾರೆ ಎಂದು ಟೀಕಿಸಿತ್ತು.
ಇನ್ನು ಮೈತ್ರಿ ಸರ್ಕಾರ ಬೀಳಿಸಲು ಬಿಜೆಪಿ ನಾಯಕರು ಪ್ರಯತ್ನಿಸುತ್ತಿದ್ದಾರೆ ಎಂಬ ಸಿದ್ದರಾಮಯ್ಯ ಆರೋಪಕ್ಕೆ ಪ್ರತಿಕ್ರಿಯಿಸಿರುವ ಅವರು, ಸರ್ಕಾರ ಬೀಳಿಸಲು ಯಾರೂ ಪ್ರಯತ್ನ ಮಾಡುವುದು ಬೇಡ. ಈ ಸರ್ಕಾರಕ್ಕೆ ಆಪರೇಷನ್ ಮತ್ತು ಅಬಾರ್ಶನ್ ಎರಡು ನೀವೇ ಮಾಡೋದು ಎಂದು ತಿರುಗೇಟು ಕೊಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT