ಯಡಿಯೂರಪ್ಪ 
ರಾಜಕೀಯ

ಉಪ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ದೊಡ್ಡ ರಾಜಕೀಯ ಬದಲಾವಣೆ: ಯಡಿಯೂರಪ್ಪ

ಕುಂದಗೋಳ ಮತ್ತು ಚಿಂಚೋಳಿ ಉಪ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ರಾಜ್ಯದಲ್ಲಿ ದೊಡ್ಡ ರಾಜಕೀಯ ಬದಲಾವಣೆಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಹುಬ್ಬಳ್ಳಿ: ಕುಂದಗೋಳ ಮತ್ತು ಚಿಂಚೋಳಿ ಉಪ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ರಾಜ್ಯದಲ್ಲಿ ದೊಡ್ಡ ರಾಜಕೀಯ ಬದಲಾವಣೆಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ರಾಜಕೀಯ ಬದಲಾವಣೆ ಆಗಬೇಕು, ಮೈತ್ರಿ ಪಕ್ಷಗಳ ಕಚ್ಚಾಟ ನಿಲ್ಲಬೇಕು ಎಂದು ರಾಜ್ಯದ ಜನ ಬಯಸುತ್ತಿದ್ದಾರೆ. ಆದರೆ ಮೈತ್ರಿ ಪಕ್ಷಗಳಲ್ಲಿ ದಿನದಿಂದ ದಿನಕ್ಕೆ ಕಚ್ಚಾಟ ಹೆಚ್ಚಾಗಲಿದೆ. ಚುನಾವಣಾ ಫಲಿತಾಂಶದ ಬಳಿಕ ಇದು ಇನ್ನಷ್ಟು ಹೆಚ್ಚಾಗಲಿದೆ ಎಂದು ಭವಿಷ್ಯ ನುಡಿದರು.
ವೀರಶೈವ ಲಿಂಗಾಯತ ಸಮಾಜದ ಮತ ಕೇಳುವ ಹಕ್ಕು ಕಾಂಗ್ರೆಸ್‍ನವರಿಗಿಲ್ಲ. ಜೆಡಿಎಸ್‍ನವರು ನಮ್ಮ ಸಂಪರ್ಕದಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದ ಅವರು, ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಹಗುರವಾಗಿ ಮಾತನಾಡುತ್ತಿರುವುದು ಖಂಡನೀಯ ಎಂದು ಹೇಳಿದರು.
ಸರ್ಕಾರವನ್ನು ಪತನಗೊಳಿಸಲು ನಾವು ಸಂಚು ಮಾಡಿಲ್ಲ. ನಾವು ವಿರೋಧ ಪಕ್ಷದಲ್ಲಿ ಕುಳಿತು ಕೆಲಸ ಮಾಡಲು ಸಿದ್ಧವಿದ್ದೇವೆ. ಸಿದ್ದರಾಮಯ್ಯ ಬೆಂಬಲಿಗರು ಕಾಲುಕೆರೆದು ಜಗಳ ಮಾಡುತ್ತಿದ್ದಾರೆ. ಸರ್ಕಾರ ತನ್ನಿಂದ ತಾನಾಗಿ ಪತನಗೊಳ್ಳಲಿದೆ. ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ಕುಮಾರಸ್ವಾಮಿಯವರ ಹೇಳಿಕೆಗೆ ತಮ್ಮ ಬೆಂಬಲವಿದೆ. ಅದನ್ನೇ ನಾನು ಹೇಳುತ್ತಿದ್ದೇನೆ ಎಂದು ಯಡಿಯೂರಪ್ಪ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಇಲ್ಲ ಪರಿಣಾಮ ಎದುರಿಸಬೇಕಾಗುತ್ತದೆ: ಕಾಂಗ್ರೆಸ್ ಗೆ 'ಅಹಿಂದ' ಎಚ್ಚರಿಕೆ

ಊಹಾಪೋಹಕ್ಕೆ ಕೊನೆಗೂ ತೆರೆ: 'ಹೌದು, ಸಿಎಂ ರಾಜೀನಾಮೆ ಕೊಡ್ತಾರಂತೆ': ಆರ್‌ ವಿ ದೇಶಪಾಂಡೆ ಹೇಳಿಕೆ

ಮಮತಾಗೆ ಮತ್ತೊಂದು ಶಾಕ್; ಪಕ್ಷದ ಎಲ್ಲಾ ಹುದ್ದೆಗಳಿಗೆ ಸಂಸದೆ ಕಾಕೋಲಿ ಘೋಷ್ ರಾಜೀನಾಮೆ

ಮಮತಾಗೆ ಬಿಗ್ ಶಾಕ್; TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

SCROLL FOR NEXT