ಬೆಂಗಳೂರು: ಮಹಾತ್ಮಾ ಗಾಂಧೀಜಿಯನ್ನು ಕೊಂದ ನಾಥುರಾಮ್ ಗೋಡ್ಸೆ ಸ್ವತಂತ್ರ ಭಾರತದ ಮೊದಲ ಉಗ್ರ ಎಂದು ನಟ, ರಾಜಕಾರಣಿ ಕಮಲ್ ಹಾಸನ್ ನೀಡಿದ ಹೇಳಿಕೆ ರಾಷ್ಟ್ರವ್ಯಾಪಿ ಹೊಸ ಕಿಚ್ಚು ಹಚ್ಚಿದೆ.
'ನಾಥೂರಾಮ್ ಗೋಡ್ಸೆಗಿಂತ ರಾಜೀವ್ ಗಾಂಧಿ ಮಹಾಕ್ರೂರಿ' ಎಂದು 'ಚೌಕಿದಾರ್' ನಳಿನ್ ಕುಮಾರ್ ಕಟೀಲ್ ಅವರು ಟ್ವೀಟ್ ಮಾಡಿ, ವಿವಾದ, ಚರ್ಚೆಗೆ ನಾಂದಿ ಹಾಡಿದ್ದಾರೆ.
ಗಾಂಧಿಯನ್ನು ಕೊಂದ ಗೋಡ್ಸೆ 'ಹಿಂದೂ ಉಗ್ರ'ನಾಗಲು ಹೇಗೆ ಸಾಧ್ಯ? ಗೋಡ್ಸೆ ಕೊಂದವರ ಸಂಖ್ಯೆ 1, ಅಜ್ಮಲ್ ಕಸಬ್ ಕೊಂದವರ ಸಂಖ್ಯೆ 72, ರಾಜೀವ್ ಗಾಂಧಿ ಕೊಂದವರ ಸಂಖ್ಯೆ 17,000 ಈಗ ನೀವೇ ಹೇಳಿ ಇವರಲ್ಲಿ ಅತೀ ಕ್ರೂರ ಕೊಲೆಗಾರ ಯಾರು? .
ನಳೀನ್ ಅವರ ಟ್ವೀಟ್ ಗೆ ಕಾಂಗ್ರೆಸ್ಸಿಗರಿಂದ ಪ್ರತಿಕ್ರಿಯೆಗಳು ಬಂದಿವೆ. ಸ್ಥಳೀಯರು ಕ್ಷೇತ್ರದ ಸಮಸ್ಯೆ ಬಗ್ಗೆ ಮೊದಲು ಗಮನಹರಿಸಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos