ರಾಜಕೀಯ

ಶುಕ್ರವಾರ ಬೆಳಗಿನವರೆಗೆ ಮಾತ್ರ ಕುಮಾರಸ್ವಾಮಿ ಸಿಎಂ: ಸದಾನಂದಗೌಡ

Shilpa D
ಬೆಂಗಳೂರು: ಲೋಕಸಭೆ ಚುನಾವಣೆ 2019ರ ಫಲಿತಾಂಶ ಮೇ 23 ರಂದು ಪ್ರಕಟಗೊಳ್ಳಲಿದ್ದು,  ಮೇ 24ರ ವರೆಗೆ ಮಾತ್ರ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಕೇಂದ್ರ ಸಚಿವ ಸದಾನಂದ ಗೌಡ ಭವಿಷ್ಯ ನುಡಿದಿದ್ದಾರೆ. 
ಎಚ್‌ಡಿ ಕುಮಾರಸ್ವಾಮಿ ಅವರು ಮೇ 24, ಶುಕ್ರವಾರ ಬೆಳಗ್ಗಿನ ವರೆಗೆ ಮಾತ್ರ ಸಿಎಂ ಆ ನಂತರ ಮೈತ್ರಿ ಸರ್ಕಾರ ಮುರಿದು ಬೀಳಲಿದೆ. ಹೊಸ ಸರ್ಕಾರ ರಚನೆಗೆ ವೇದಿಕೆ ಸಿದ್ಧವಾಗಿದೆ ಎಂದು ಸದಾನಂದ ಗೌಡ ಹೇಳಿದ್ದಾರೆ. 
ನಾಳೆ ಸಂಜೆ ಅಥವಾ ನಾಡಿದ್ದು ಬೆಳಗ್ಗೆ ವರೆಗೆ ಮಾತ್ರ. ನಾಳೆ ರಾತ್ರಿ ಕುಮಾರಸ್ವಾಮಿ ಅವರಿಗೆ ನಿದ್ದೆ ಬರುವುದಿಲ್ಲ. ಹಾಗಾಗಿ ಶುಕ್ರವಾರ ಬೆಳಗ್ಗೆ ಶೇ.100ರಷ್ಟು ಕುಮಾರಸ್ವಾಮಿ ಸಿಎಂ ಹುದ್ದೆಯಿಂದ ಕೆಳಗಿಳಿಯುತ್ತಾರೆ ಎಂದು ಸದಾನಂದ ಗೌಡ ತಿಳಿಸಿದ್ದಾರೆ. 
ಲೋಕಸಭೆ ಚುನಾವಣೆ ಫಲಿತಾಂಶ ಮೈತ್ರಿ ಸರಕಾರದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ಬಿಜೆಪಿ ನಾಯಕ ತಿಳಿಸಿದ್ದಾರೆ. 
SCROLL FOR NEXT