ಜಿಎಸ್ ಬಸವರಾಜು - ದೇವೇಗೌಡ 
ರಾಜಕೀಯ

ತುಮಕೂರಿಗೆ ನಾನೇ ಮಣ್ಣಿನ ಮಗ, ದೇವೇಗೌಡ ದ್ವೇಷದ ರಾಜಕಾರಣ ಬಿಡಲಿ: ಜಿ.ಎಸ್. ಬಸವರಾಜು

ದೇವೇಗೌಡರು ಹಾಸನಕ್ಕೆ ಮಾತ್ರ ಮಣ್ಣಿನ ಮಗನೇ ಹೊರತು ತುಮಕೂರಿಗಲ್ಲ. ತುಮಕೂರಿಗೆ ನಾನೇ ಮಣ್ಣಿನ ಮಗ. ವಯೋವೃದ್ಧರಾಗಿರುವ...

ಬೆಂಗಳೂರು: ದೇವೇಗೌಡರು ಹಾಸನಕ್ಕೆ ಮಾತ್ರ ಮಣ್ಣಿನ ಮಗನೇ ಹೊರತು ತುಮಕೂರಿಗಲ್ಲ. ತುಮಕೂರಿಗೆ ನಾನೇ ಮಣ್ಣಿನ ಮಗ. ವಯೋವೃದ್ಧರಾಗಿರುವ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಈಗಲಾದರೂ ದ್ವೇಷದ ರಾಜಕಾರಣ ಬಿಟ್ಟು ನೆಮ್ಮದಿಯ ರಾಜಕಾರಣ ಮಾಡಲಿ ಎಂದು ತುಮಕೂರು ಕ್ಷೇತ್ರದ ನೂತನ ಬಿಜೆಪಿ ಸಂಸದ ಜಿ.ಎಸ್. ಬಸವರಾಜು ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರು ರಾಜಕಾರಣದಲ್ಲಿ ಹಲವರನ್ನು ಮುಗಿಸಿದಂತೆ ತಮ್ಮನ್ನೂ ಎರಡೂ ಬಾರಿ ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದ್ದರು. ಈಗ ಆಕಸ್ಮಿಕವಾಗಿ ಅವರೇ ನನ್ನ ಕೈಗೆ ಸಿಕ್ಕಿ ಹಾಕಿಕೊಂಡರು. ಅವರಿಗೆ ಜಿಲ್ಲೆಯ ಜನರೇ ತಕ್ಕ ಪಾಠ ಕಲಿಸಿದ್ದಾರೆ ಎಂದರು.
ತುಮಕೂರಿಗೆ ಹೇಮಾವತಿ ನೀರು ಹರಿಯದಂತೆ ದೇವೇಗೌಡ ಹಾಗೂ ಅವರ ಮಗ ರೇವಣ್ಣ ಜನರಿಗೆ ಮೋಸ ಮಾಡಿದ್ದು, ಅವರ ಮೋಸವೇ ಅವರಿಗೆ ತಿರುಗುಬಾಣವಾಗಿದೆ. ವಯಸಿನಲ್ಲಿ ಹಿರಿಯರಾದ ಗೌಡರು ಈಗಲಾದರೂ ಮಹಾಘಟ್ ಬಂಧನ್ ಎನ್ನುವುದನ್ನೆಲ್ಲಾ ಬಿಟ್ಟು ನೆಮ್ಮದಿಯಾಗಿರಲಿ ಎಂದು ಕಿವಿಮಾತು ಹೇಳಿದರು. 
ಲೋಕಸಭಾ ಚುನಾವಣೆಯಲ್ಲಿ ತಮ್ಮ ಹಾಗೂ ದೇವೇಗೌಡರ ನಡುವೆ ಸಮರ ನಡೆದಿತ್ತು. ಕಾಂಗ್ರೆಸ್‍ ಪಕ್ಷದಲ್ಲಿಯೂ ತಮಗೆ ಸ್ನೇಹಿತರಿದ್ದು, ಅವರು ನನ್ನ ಗೆಲುವಿಗೆ ಸಹಕಾರ ನೀಡಿರಬಹುದೇನೋ ..ಅವರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT