ಭಿತ್ತಿಪತ್ರ 
ರಾಜಕೀಯ

ತುಮಕೂರು: ಪರಮೇಶ್ವರ ಹಠಾವೋ, ಕಾಂಗ್ರೆಸ್ ಬಚಾವೊ , ಹಲವು ಕಡೆಗಳಲ್ಲಿ ಭಿತ್ತಿಪತ್ರ

ಮಾಜಿ ಪ್ರಧಾನಿ ಎಚ್ . ಡಿ. ದೇವೇಗೌಡರನ್ನು ತುಮಕೂರಿನಿಂದ ಚುನಾವಣೆಗೆ ನಿಲ್ಲಿಸಿದ್ದಕ್ಕೆ ಕಾಂಗ್ರೆಸ್ ಪಕ್ಷದ ಹಲವು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಆಕ್ರೋಶ ಇನ್ನೂ ಮಡಗಟ್ಟಿದೆ. ನಗರದ ಹಲವು ಕಡೆಗಳಲ್ಲಿ ಪರಮೇಶ್ವರ ಹಠಾವೋ, ಕಾಂಗ್ರೆಸ್ ಬಚಾವೋ ಎಂಬ ಭಿತ್ತಿಗಳನ್ನು ಅಂಟಿಸಲಾಗಿತ್ತು.

ತುಮಕೂರು: ಮಾಜಿ ಪ್ರಧಾನಿ ಎಚ್ . ಡಿ. ದೇವೇಗೌಡರನ್ನು ತುಮಕೂರಿನಿಂದ ಚುನಾವಣೆಗೆ ನಿಲ್ಲಿಸಿದ್ದಕ್ಕೆ ಕಾಂಗ್ರೆಸ್ ಪಕ್ಷದ ಹಲವು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಆಕ್ರೋಶ ಇನ್ನೂ ಮಡಗಟ್ಟಿದೆ. ನಗರದ ಹಲವು ಕಡೆಗಳಲ್ಲಿ ಪರಮೇಶ್ವರ ಹಠಾವೋ, ಕಾಂಗ್ರೆಸ್ ಬಚಾವೋ ಎಂಬ ಭಿತ್ತಿಗಳನ್ನು ಅಂಟಿಸಲಾಗಿತ್ತು.

ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರ ಭಾವಚಿತ್ರ ಭಿತ್ತಿಪತ್ರಗಳಲ್ಲಿ ಇದೆ. ಭಿತ್ತಿಪತ್ರದ ಕೆಳಗೆ ಇಂತಿ ನೊಂದ ಕಾರ್ಯಕರ್ತರು , ತುಮಕೂರು ಜಿಲ್ಲೆ ಎಂದಿದೆ.

ಬಿಜಿಎಸ್ ವೃತ್ತದ ಬಳಿಯ ಗ್ರಂಥಾಲಯದ ಗೋಡೆ, ಸ್ಕೈವಾಕ್ , ವಾಲ್ಮೀಕಿನಗರದಲ್ಲಿ ಭಿತ್ತಿಪತ್ರಗಳು ಹೆಚ್ಚು ಕಂಡುಬಂದಿವೆ. ತೆರವುಗೊಳಿಸುವಂತೆ  ಪರಮೇಶ್ವರ ಬೆಂಬಲಿಗರು ಮಾಡಿದ ಮನವಿ ನಂತರ ಅವುಗಳನ್ನು ತೆರವುಗೊಳಿಸಲಾಗಿದೆ.
ಕಾಂಗ್ರೆಸ್ ಬಂಡಾಯ ನಾಯಕರಾದ ಮಧುಗಿರಿಯ ಮಾಜಿ ಶಾಸಕ ಕೆಎನ್ ರಾಜಣ್ಣ ಹಾಗೂ ಮಾಜಿ ಸಂಸದ ಎಸ್ ಪಿ ಮುದ್ದಹನುಮೇಗೌಡ ಮತ್ತಿತರ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭ್ಯರ್ಥಿ ಆಯ್ಕೆಯನ್ನು ಅಂತಿಮಗೊಳಿಸಬೇಕಿತ್ತು.ದೇವೇಗೌಡರ ಬದಲಿಗೆ ಮುದ್ದ ಹನುಮೇಗೌಡರಿಗೆ ಟಿಕೆಟ್ ನೀಡಬೇಕಾಗಿತ್ತು ಎಂಬುದು ಪಕ್ಷದ ಕಾರ್ಯಕರ್ತರ ಅಭಿಪ್ರಾಯವಾಗಿತ್ತು ಎಂದು ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧು ಆದೇಶಕ್ಕೆ ಸುಪ್ರೀಂ ತಡೆ!

ಬೆಂಗಳೂರಿನಲ್ಲಿ ಸುಡು ಬಿಸಿಲು: 30 ಡಿಗ್ರಿ ಸೆ.ಗಿಂತ ಹೆಚ್ಚಿನ ಉಷ್ಣಾಂಶ ದಾಖಲು! ಆರೋಗ್ಯ ತಜ್ಞರು ಏನಂತಾರೆ?

'ನಾನು ಭ್ರಷ್ಟನಲ್ಲ': ಕೋರ್ಟ್ ತೀರ್ಪಿನ ಬಳಿಕ ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದ ಅರವಿಂದ್ ಕೇಜ್ರಿವಾಲ್-Video

Delhi excise policy case: ಅರವಿಂದ್ ಕೇಜ್ರಿವಾಲ್-ಮನೀಶ್ ಸಿಸೋಡಿಯಾ ವಿರುದ್ಧ ಕೇಸು ಖುಲಾಸೆ-Video

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಬಿಗ್ ರಿಲೀಫ್: ಶಾಸಕ ವಿನಯ್‌ ಕುಲಕರ್ಣಿಗೆ 'ಸುಪ್ರೀಂ' ಜಾಮೀನು!

SCROLL FOR NEXT