ಮಹೇಶ್ ಕುಮಟಳ್ಳಿ 
ರಾಜಕೀಯ

ಕಾಂಗ್ರೆಸ್‍ ತೊರೆಯುವುದಿಲ್ಲ, ಮಂತ್ರಿ ಸ್ಥಾನದ ಆಸೆ ಇಲ್ಲ: ಮಹೇಶ್ ಕುಮಟಳ್ಳಿ ಸ್ಪಷ್ಟನೆ

ಆಪರೇಷನ್ ಕಮಲದ ಬಗ್ಗೆ ನನಗೇನೂ ಗೊತ್ತಿಲ್ಲ. ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಒಂದು ವೇಳೆ ಏನೇ ಭಿನ್ನಾಭಿಪ್ರಾಯಗಳಿದ್ದರೂ ಇದ್ದರೆ ಅವುಗಳನ್ನು ಪಕ್ಷದೊಳಗೆ ಸರಿಪಡಿಸಿಕೊಳ್ಳುತ್ತೇವೆ.

ಬೆಂಗಳೂರು: ಆಪರೇಷನ್ ಕಮಲದ ಬಗ್ಗೆ ನನಗೇನೂ ಗೊತ್ತಿಲ್ಲ. ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಒಂದು ವೇಳೆ ಏನೇ ಭಿನ್ನಾಭಿಪ್ರಾಯಗಳಿದ್ದರೂ ಇದ್ದರೆ ಅವುಗಳನ್ನು ಪಕ್ಷದೊಳಗೆ ಸರಿಪಡಿಸಿಕೊಳ್ಳುತ್ತೇವೆ. ಬೇರೆ ಯಾವ ಪಕ್ಷಕ್ಕೂ ನಾನು ಹೋಗುವುದಿಲ್ಲ. ಕಾಂಗ್ರೆಸ್‍ ತೊರೆಯುವುದಿಲ್ಲ ಎಂದು ಅತೃಪ್ತ ಶಾಸಕ ರಮೇಶ್ ಜಾರಕಿಹೊಳಿ ಬಣದಲ್ಲಿ ಗುರುತಿಸಿಕೊಂಡಿರುವ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಸೋಮವಾರ ಸ್ಪಷ್ಟಪಡಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷ್ಣಾ ನದಿ ನೀರು ಸಂಬಂಧ ಸರ್ಕಾರದಿಂದ ಕೆಲಸಗಳು ಆಗಬೇಕಿವೆ. ಹೀಗಾಗಿ ಬೆಂಗಳೂರಿಗೆ ಬಂದು ಮೂರು ದಿನಗಳಾದವು. ನಾನು ಕ್ಷೇತ್ರದಲ್ಲಿ ಇಲ್ಲದ್ದನ್ನು ನೋಡಿ ಗೋವಾಗೆ ಹೋಗಿದ್ದೇನೆ ಎಂದು ಸುದ್ದಿ ಹರಡಲಾಗಿದೆ. ಆದರೆ ನಾನು ಎಲ್ಲಿಯೂ ಹೋಗಿರಲಿಲ್ಲ ಎಂದು ಸಮರ್ಥಿಸಿಕೊಂಡರು.
ರಮೇಶ್ ಜಾರಕಿಹೊಳಿ ಜೊತೆಗೆ ಗುರುತಿಸಿಕೊಂಡಿದ್ದೀರಲ್ಲಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮಹೇಶ್ ಕುಮಟಳ್ಳಿ, ಹೌದು, ನನ್ನನ್ನು ಸೇರಿದಂತೆ ಕಾಂಗ್ರೆಸ್‍ನ ಎಲ್ಲಾ ಶಾಸಕರೂ ಅವರ ಜೊತೆಯಲ್ಲಿಯೇ ಇರುತ್ತಾರೆ ಎಂದು ಮಾರ್ಮಿಕವಾಗಿ ನುಡಿದರು.
ನಾನು ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೂ, ಸಚಿವ ಸ್ಥಾನಕ್ಕೂ ಆಕಾಂಕ್ಷಿಯಲ್ಲ. ಅಭಿವೃದ್ಧಿ ರಾಜಕಾರಣದಲ್ಲಿ ನಂಬಿಕೆ ಇರುವ ವ್ಯಕ್ತಿ ಎಂದು ಸಂಪುಟ ಪುನಾರಚನೆಯಲ್ಲಿ ತಮಗೆ ಅವಕಾಶ ನೀಡಲಾಗುತ್ತಿದೆಯೇ ಎಂಬ ಪ್ರಶ್ನೆಯೊಂದಕ್ಕೆ ಅವರು ಈ ರೀತಿ ಉತ್ತರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT