ಡಿಕೆ ಶಿವಕುಮಾರ್ 
ರಾಜಕೀಯ

ಸಹೋದರನ ಗೆಲುವಿನ ಖುಷಿ ಕೂಡ ನನಗಿಲ್ಲ, ಇಂತಹ ಆಘಾತಕಾರಿ ಸೋಲು ನಿರೀಕ್ಷಿಸಿರಲಿಲ್ಲ: ಡಿಕೆ ಶಿವಕುಮಾರ್

ಲೋಕಸಭಾ ಚುನಾವಣೆಯಲ್ಲಿನ ಕಾಂಗ್ರೆಸ್ ಪಕ್ಷದ ಸೋಲು ನಿಜಕ್ಕೂ ಆಘಾತ ಮೂಡಿಸಿದೆ. ಸಹೋದರನ ಗೆಲುವಿನ ಖುಷಿ ಕೂಡ ನನಗಿಲ್ಲ ಎಂದು ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿನ ಕಾಂಗ್ರೆಸ್ ಪಕ್ಷದ ಸೋಲು ನಿಜಕ್ಕೂ ಆಘಾತ ಮೂಡಿಸಿದೆ. ಸಹೋದರನ ಗೆಲುವಿನ ಖುಷಿ ಕೂಡ ನನಗಿಲ್ಲ ಎಂದು ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಚುನಾವಣೆ ಬೆನ್ನಲ್ಲೇ ಆಸ್ಟ್ರೇಲಿಯಾ ಪ್ರವಾಸಕ್ಕೆ ಹಾರಿದ್ದ ಡಿಕೆ ಶಿವಕುಮಾರ್ ಫಲಿತಾಂಶ ಪ್ರಕಟಣೆ ಬಳಿಕ ತವರಿಗೆ ವಾಪಸಾಗಿದ್ದು, ಬಳಿಕ ಇದೇ ಮೊದಲ ಬಾರಿಗೆ ಫಲಿತಾಂಶದ ಕುರಿತು ಮಾಧ್ಯಮಗಳೊಂದಿಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.  ರಾಜ್ಯದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ​ ಕೇವಲ ಒಂದೇ ಒಂದು ಸ್ಥಾನ ಗೆಲ್ಲಲು ಮಾತ್ರ ಸಾಧ್ಯವಾಗಿದ್ದು, ಖರ್ಗೆ, ದೇವೇಗೌಡರಂತಹ ಹಿರಿಯ ನಾಯಕರೇ ಸೋಲು ಕಂಡಿರುವುದು ತಮಗೆ ಆಘಾತವನ್ನುಂಟು ಮಾಡಿದೆ ಎಂದು ಶಿವಕುಮಾರ್ ಹೇಳಿದ್ದಾರೆ.
'ನಾನು ಮಹಾತ್ಮ ಗಾಂಧಿಜಿ ಅವರ ಮೂರು ಕೋತಿಗಳಂತೆ ಬಾಯಿಗೆ ಬೀಗ, ಕಿವಿಗೆ ಹತ್ತಿ, ಕಣ್ಣಿಗೆ ಬಟ್ಟೆ ಕಟ್ಟಿಕೊಂಡಿದ್ದೇನೆ. ನನಗೆಲ್ಲಾ ಗೊತ್ತಾಗಿದೆ. ನನಗೆಲ್ಲಾ ಮಾಹಿತಿ ಸಿಕ್ಕಿದೆ. ರಾಜ್ಯದ ಮತ್ತು ಮಂಡ್ಯದ ಚುನಾವಣಾ ಫಲಿತಾಂಶದ ಬಗ್ಗೆ ನಾನೇನೂ ಮಾತನಾಡುವುದಿಲ್ಲ. ಆದರೆ ಪಕ್ಷಜದ ಈ ರೀತಿಯ ಸೋಲು ನಿಜಕ್ಕೂ ಆಘಾತವನ್ನುಂಟು ಮಾಡಿದೆ. ಪಕ್ಷದ ಸೋಲಿಗೆ ಸಭೆ ಸೇರಿ ಚರ್ಚೆ ನಡೆಸುತ್ತೇವೆ. ಈಗಷ್ಟೇ ಆಸಿಸ್ ಪ್ರವಾಸದಿಂದ ನಾನು ಮರಳಿದ್ದು, ಶೀಘ್ರ ಪಕ್ಷದ ನಾಯಕರನ್ನು ಭೇಟಿ ಮಾಡಿ ಚರ್ಚಿಸುತ್ತೇನೆ. ಗಾಂಧಿ ಕುಟುಂಬ ಪಕ್ಷವನ್ನು ಸದಾ ಕಾಲ ಯಾವುದೇ ಬಿಕ್ಕಟ್ಟುಗಳಿಂದ ರಕ್ಷಿಸುತ್ತಿದೆ. ದೇಶದಲ್ಲಿ ಕಾಂಗ್ರೆಸ್ ಮುಕ್ತ ಅಸಾಧ್ಯ ಎಂದೂ ಡಿಕೆಶಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ