ಬೆಂಗಳೂರು: ಕಾವೇರಿ ವಿಚಾರದಲ್ಲಿ ರಾಜಕೀಯ ಬೇಡ,ಎಲ್ಲವನ್ನು ಮರೆತು ಎಲ್ಲರೂ ಒಗ್ಗಟ್ಟಾಗಿ ಕಾವೇರಿ ವಿಚಾರದಲ್ಲಿ ಒಂದಾಗಬೇಕು ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ.
ರೆಬೆಲ್ ಸ್ಟಾರ್ ಅಂಬರೀಷ್ ಅವರ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಅಂಬರೀಷ್ ಸಮಾಧಿಗೆ ಪೂಜೆ ಸಲ್ಲಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾವೇರಿ ವಿಚಾರವಾಗಿ ಪರಿಣಿತ ತಜ್ಞರನ್ನು ಭೇಟಿ ಮಾಡಿದ್ದೇನೆ. ನಾನು ಇನ್ನು ಪ್ರಮಾಣ ವಚನವನ್ನು ಸ್ವೀಕರಿಸಿಲ್ಲ, ಆಗಲೇ ಸಾಕಷ್ಟು ಆರೋಪ ಮಾಡ್ತಿದ್ದಾರೆ. ಸೋತ ಹತಾಶೆಯಲ್ಲಿ ಕೆಲವರು ಏನೆನೋ ಮಾತಾನಾಡುತ್ತೀದ್ದಾರೆ ಎಂದು ಹೇಳಿದ್ದಾರೆ.
ಮಂಡ್ಯ ಜನತೆ ದೊಡ್ಡ ಜವಾಬ್ದಾರಿ ಕೊಟ್ಟಿದ್ದಾರೆ. ಅಂಬರೀಶ್ ಅವರೇ ನನಗೆ ಸ್ಪೂರ್ತಿ, ಐದು ನಿಮಿಷದ ಪಬ್ಲಿಸಿಟಿ ಯಿಂದ ಯಾವುದೇ ಪ್ರಯೋಜನವಿಲ್ಲ, ಜನರು ದೊಡ್ಡ ಸಂಖ್ಯೆಯಲ್ಲಿ ನನ್ನ ಗೆಲ್ಲಿಸಿದ್ದಾರೆ. ಒಗ್ಗಟ್ಟಾಗಿ ಮಾಡಿದರೆ ಎಂಥಾ ಕೆಲಸವನ್ನಾದರು ಬೇಗ ಮಾಡಬಹುದು. ಒಬ್ಬರನ್ನು ಒಬ್ಬರು ಬ್ಲೇಮ್ ಮಾಡಿದರೆ ಯಾವುದೇ ಪ್ರಯೋಜನವಿಲ್ಲ ಎಂದು ಸಲಹೆ ವೀ
ಬಿಜೆಪಿ ಗೆ ಹೋಗುತ್ತೀರಾ ಎಂದಿದಕ್ಕೆ ಜನಾದೇಶ ಏನು ಹೇಳುತ್ತೋ ಅದನ್ನೆ ನಾನು ಮಾಡೋದು. ಇಲ್ಲಿವರೆಗೆ ಯಾರೂ ಸಂಪರ್ಕ ಮಾಡಿಲ್ಲ, ನಾನು ಮೊದಲಿನಿಂದಲೂ ಜನಾದೇಶವನ್ನು ಪಾಲಿಸುತ್ತಿದ್ದೇನೆ . ಮುಂದೇಯೂ ಹಾಗೆಯೇ ಮಾಡುತ್ತೇನೆ ಎಂದು ಸುಮಲತಾ ಅಂಬರೀಶ್ ತಿಳಿಸಿದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos