ಸುಮಲತಾ ಅಂಬರೀಷ್ 
ರಾಜಕೀಯ

ಕಾವೇರಿ ವಿಷಯದಲ್ಲಿ ರಾಜಕೀಯ ಬೇಡ, ಎಲ್ಲರು ಒಗ್ಗಟ್ಟಾಗಿ ಹೋರಾಡೋಣ: ಸುಮಲತಾ

ಕಾವೇರಿ ವಿಚಾರದಲ್ಲಿ ರಾಜಕೀಯ ಬೇಡ,ಎಲ್ಲವನ್ನು ಮರೆತು ಎಲ್ಲರೂ ಒಗ್ಗಟ್ಟಾಗಿ ಕಾವೇರಿ ವಿಚಾರದಲ್ಲಿ ಒಂದಾಗಬೇಕು ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ....

ಬೆಂಗಳೂರು: ಕಾವೇರಿ ವಿಚಾರದಲ್ಲಿ ರಾಜಕೀಯ ಬೇಡ,ಎಲ್ಲವನ್ನು ಮರೆತು ಎಲ್ಲರೂ ಒಗ್ಗಟ್ಟಾಗಿ ಕಾವೇರಿ ವಿಚಾರದಲ್ಲಿ ಒಂದಾಗಬೇಕು ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ.
ರೆಬೆಲ್ ಸ್ಟಾರ್ ಅಂಬರೀಷ್ ಅವರ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಅಂಬರೀಷ್ ಸಮಾಧಿಗೆ ಪೂಜೆ ಸಲ್ಲಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾವೇರಿ ವಿಚಾರವಾಗಿ ಪರಿಣಿತ ತಜ್ಞರನ್ನು ಭೇಟಿ ಮಾಡಿದ್ದೇನೆ. ನಾನು ಇನ್ನು ಪ್ರಮಾಣ ವಚನವನ್ನು ಸ್ವೀಕರಿಸಿಲ್ಲ, ಆಗಲೇ ಸಾಕಷ್ಟು ಆರೋಪ ಮಾಡ್ತಿದ್ದಾರೆ.  ಸೋತ ಹತಾಶೆಯಲ್ಲಿ ಕೆಲವರು ಏನೆನೋ ಮಾತಾನಾಡುತ್ತೀದ್ದಾರೆ ಎಂದು ಹೇಳಿದ್ದಾರೆ.
ಮಂಡ್ಯ ಜನತೆ ದೊಡ್ಡ ಜವಾಬ್ದಾರಿ ಕೊಟ್ಟಿದ್ದಾರೆ. ಅಂಬರೀಶ್ ಅವರೇ ನನಗೆ ಸ್ಪೂರ್ತಿ,  ಐದು ನಿಮಿಷದ ಪಬ್ಲಿಸಿಟಿ ಯಿಂದ ಯಾವುದೇ ಪ್ರಯೋಜನವಿಲ್ಲ, ಜನರು ದೊಡ್ಡ ಸಂಖ್ಯೆಯಲ್ಲಿ ನನ್ನ ಗೆಲ್ಲಿಸಿದ್ದಾರೆ. ಒಗ್ಗಟ್ಟಾಗಿ ಮಾಡಿದರೆ ಎಂಥಾ ಕೆಲಸವನ್ನಾದರು ಬೇಗ ಮಾಡಬಹುದು. ಒಬ್ಬರನ್ನು ಒಬ್ಬರು ಬ್ಲೇಮ್ ಮಾಡಿದರೆ ಯಾವುದೇ ಪ್ರಯೋಜನವಿಲ್ಲ ಎಂದು ಸಲಹೆ ವೀ
ಬಿಜೆಪಿ ಗೆ ಹೋಗುತ್ತೀರಾ ಎಂದಿದಕ್ಕೆ ಜನಾದೇಶ ಏನು ಹೇಳುತ್ತೋ ಅದನ್ನೆ ನಾನು ಮಾಡೋದು. ಇಲ್ಲಿವರೆಗೆ ಯಾರೂ ಸಂಪರ್ಕ ಮಾಡಿಲ್ಲ, ನಾನು ಮೊದಲಿನಿಂದಲೂ ಜನಾದೇಶವನ್ನು ಪಾಲಿಸುತ್ತಿದ್ದೇನೆ . ಮುಂದೇಯೂ ಹಾಗೆಯೇ ಮಾಡುತ್ತೇನೆ ಎಂದು ಸುಮಲತಾ ಅಂಬರೀಶ್ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ