ಸುಮಲತಾ ಅಂಬರೀಷ್ 
ರಾಜಕೀಯ

ಕಾವೇರಿ ವಿಷಯದಲ್ಲಿ ರಾಜಕೀಯ ಬೇಡ, ಎಲ್ಲರು ಒಗ್ಗಟ್ಟಾಗಿ ಹೋರಾಡೋಣ: ಸುಮಲತಾ

ಕಾವೇರಿ ವಿಚಾರದಲ್ಲಿ ರಾಜಕೀಯ ಬೇಡ,ಎಲ್ಲವನ್ನು ಮರೆತು ಎಲ್ಲರೂ ಒಗ್ಗಟ್ಟಾಗಿ ಕಾವೇರಿ ವಿಚಾರದಲ್ಲಿ ಒಂದಾಗಬೇಕು ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ....

ಬೆಂಗಳೂರು: ಕಾವೇರಿ ವಿಚಾರದಲ್ಲಿ ರಾಜಕೀಯ ಬೇಡ,ಎಲ್ಲವನ್ನು ಮರೆತು ಎಲ್ಲರೂ ಒಗ್ಗಟ್ಟಾಗಿ ಕಾವೇರಿ ವಿಚಾರದಲ್ಲಿ ಒಂದಾಗಬೇಕು ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ.
ರೆಬೆಲ್ ಸ್ಟಾರ್ ಅಂಬರೀಷ್ ಅವರ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಅಂಬರೀಷ್ ಸಮಾಧಿಗೆ ಪೂಜೆ ಸಲ್ಲಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾವೇರಿ ವಿಚಾರವಾಗಿ ಪರಿಣಿತ ತಜ್ಞರನ್ನು ಭೇಟಿ ಮಾಡಿದ್ದೇನೆ. ನಾನು ಇನ್ನು ಪ್ರಮಾಣ ವಚನವನ್ನು ಸ್ವೀಕರಿಸಿಲ್ಲ, ಆಗಲೇ ಸಾಕಷ್ಟು ಆರೋಪ ಮಾಡ್ತಿದ್ದಾರೆ.  ಸೋತ ಹತಾಶೆಯಲ್ಲಿ ಕೆಲವರು ಏನೆನೋ ಮಾತಾನಾಡುತ್ತೀದ್ದಾರೆ ಎಂದು ಹೇಳಿದ್ದಾರೆ.
ಮಂಡ್ಯ ಜನತೆ ದೊಡ್ಡ ಜವಾಬ್ದಾರಿ ಕೊಟ್ಟಿದ್ದಾರೆ. ಅಂಬರೀಶ್ ಅವರೇ ನನಗೆ ಸ್ಪೂರ್ತಿ,  ಐದು ನಿಮಿಷದ ಪಬ್ಲಿಸಿಟಿ ಯಿಂದ ಯಾವುದೇ ಪ್ರಯೋಜನವಿಲ್ಲ, ಜನರು ದೊಡ್ಡ ಸಂಖ್ಯೆಯಲ್ಲಿ ನನ್ನ ಗೆಲ್ಲಿಸಿದ್ದಾರೆ. ಒಗ್ಗಟ್ಟಾಗಿ ಮಾಡಿದರೆ ಎಂಥಾ ಕೆಲಸವನ್ನಾದರು ಬೇಗ ಮಾಡಬಹುದು. ಒಬ್ಬರನ್ನು ಒಬ್ಬರು ಬ್ಲೇಮ್ ಮಾಡಿದರೆ ಯಾವುದೇ ಪ್ರಯೋಜನವಿಲ್ಲ ಎಂದು ಸಲಹೆ ವೀ
ಬಿಜೆಪಿ ಗೆ ಹೋಗುತ್ತೀರಾ ಎಂದಿದಕ್ಕೆ ಜನಾದೇಶ ಏನು ಹೇಳುತ್ತೋ ಅದನ್ನೆ ನಾನು ಮಾಡೋದು. ಇಲ್ಲಿವರೆಗೆ ಯಾರೂ ಸಂಪರ್ಕ ಮಾಡಿಲ್ಲ, ನಾನು ಮೊದಲಿನಿಂದಲೂ ಜನಾದೇಶವನ್ನು ಪಾಲಿಸುತ್ತಿದ್ದೇನೆ . ಮುಂದೇಯೂ ಹಾಗೆಯೇ ಮಾಡುತ್ತೇನೆ ಎಂದು ಸುಮಲತಾ ಅಂಬರೀಶ್ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT