ದಿನೇಶ್ ಗುಂಡೂರಾವ್ 
ರಾಜಕೀಯ

ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶದಿಂದ ಇವಿಎಂಗಳ ಮೇಲೆ ಅನುಮಾನ ಹೆಚ್ಚಾಗಿದೆ: ದಿನೇಶ್ ಗುಂಡೂರಾವ್

ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಒಂದು ವಾರದ ಬಳಿಕ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಉತ್ತಮ ಫಲಿತಾಂಶ ಬಂದಿರುವುದು....

ಬೆಂಗಳೂರು: ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಒಂದು ವಾರದ ಬಳಿಕ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಉತ್ತಮ ಫಲಿತಾಂಶ ಬಂದಿರುವುದು ನಮಗೆ ಇವಿಎಂ ಬಗ್ಗೆ ಅನುಮಾನ ಹೆಚ್ಚಾಗುವಂತೆ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಶುಕ್ರವಾರ ಹೇಳಿದ್ದಾರೆ.
ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 509 ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದೆ. ಸ್ಥಳೀಯ ಮಟ್ಟದಲ್ಲಿ ಕಾಂಗ್ರೆಸ್ ಬಲಿಷ್ಠವಾಗಿದೆ. ಒಂದೊಂದು ಚುನಾವಣೆಯಲ್ಲಿ ಒಂದೊಂದು ರೀತಿಯ ಫಲಿತಾಂಶ ಬರುತ್ತಿದೆ. ಈ ಫಲಿತಾಂಶ ನೋಡಿದರೆ, ಲೋಕಸಭೆ ಚುನಾವಣೆ ಬಗ್ಗೆ ಆಶ್ಚರ್ಯವಾಗುತ್ತಿದೆ ಎಂದಿದ್ದಾರೆ.
ಇವಿಎಂಗಳ ವಿಚಾರದಲ್ಲಿ 370 ಲೋಕಸಭಾ ಕ್ಷೇತ್ರಗಳ ಫಲಿತಾಂಶದಲ್ಲಿ ಹೊಂದಾಣಿಕೆ ಕಂಡು ಬರುತ್ತಿಲ್ಲ. ಈ ಬಗ್ಗೆ ಚುನಾವಣಾ ಆಯೋಗ ಇನ್ನೂ ಸ್ಪಷ್ಟನೆ ನೀಡಿಲ್ಲ ಎಂದು ಅವರು ಆರೋಪಿಸಿದರು.
15 ದಿನದ ಹಿಂದೆ ನಡೆದ ಲೋಕಸಭೆ ಚುನಾವಣೆಯ ಮತದಾನಕ್ಕೂ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆ ನೋಡಿದರೆ ಆಶ್ಚರ್ಯವಾಗುತ್ತಿದೆ. ಆದರೆ ಈ ಫಲಿತಾಂಶ ಪಕ್ಷಕ್ಕೆ ಮತ್ತಷ್ಟು ಶಕ್ತಿ ನೀಡಿದಂತಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ಮೊದಲ ಸ್ಥಾನದಲ್ಲಿದ್ದು, ಬಿಜೆಪಿ ಎರಡನೇ ಸ್ಥಾನದಲ್ಲಿದೆ. ಸ್ಥಳೀಯ ಮಟ್ಟದಲ್ಲಿ ಕಾಂಗ್ರೆಸ್ ಪ್ರಬಲವಾಗಿದೆ. ಕಾಂಗ್ರೆಸ್ ಜನ ಬೆಂಬಲ ಕಳೆದುಕೊಂಡಿದೆ ಎಂದು ಆರೋಪಿಸುತ್ತಿದ್ದ ಬಿಜೆಪಿ ನಾಯಕರು ಈ ಫಲಿತಾಂಶ ನೋಡಿ ಏನು ಹೇಳುತ್ತಾರೆ ಎಂದು ಪ್ರಶ್ನಿಸಿದರು.
ಲೋಕಸಭೆ ಚುನಾವಣೆ ವೇಳೆ ನಡೆದ ಮತದಾನದ ಸಂಖ್ಯೆ ಹಾಗೂ ಮತ ಎಣಿಕೆ ವೇಳೆ ಬಂದಿರುವ ಅಂಕಿ ಸಂಖ್ಯೆಗಳಲ್ಲಿ ವ್ಯತ್ಯಾಸ ಕಂಡು ಬರುತ್ತಿದೆ. ಮತದಾನ ಆಗಿದ್ದಕ್ಕಿಂತ ಹೆಚ್ಚು ಮತಗಳ ಎಣಿಕೆ ಆಗಿದೆ ಎಂಬ ವರದಿ ಬರುತ್ತಿದೆ. ಈ ಬಗ್ಗೆ ಇನ್ನು ಚುನಾವಣಾ ಆಯೋಗ ಉತ್ತರ ಕೊಟ್ಟಿಲ್ಲ. ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗ ವಿರೋಧ ಪಕ್ಷಗಳಿಗೆ ತೃಪ್ತಿಕರವಾದ ಸ್ಪಷ್ಟನೆ ನೀಡಲಿ ಎಂದು ಆಗ್ರಹಿಸಿದರು.
ಇವಿಎಂ ಯಂತ್ರಗಳ ದೋಷದ ಬಗ್ಗೆ ಈಗಲೇ ನಾನು ಏನು ಹೇಳುವುದಿಲ್ಲ. ಆದರೆ ಆ ಬಗ್ಗೆ ಒಂದಿಷ್ಟು ಅನುಮಾನಗಳು ನಮಗಿವೆ. ಲೋಕಸಭೆ ಚುನಾವಣಾ ಫಲಿತಾಂಶ ನೋಡಿ ನಾವೆಲ್ಲೋ ತಪ್ಪು ಮಾಡಿದ್ದೇವೆ ಎಂದುಕೊಂಡಿದ್ದೆವು. ಆದರೆ ಜನ ನಮ್ಮನ್ನ ಕೈ ಬಿಟ್ಟಿಲ್ಲ ಎನ್ನುವುದು ನಗರ, ಸ್ಥಳೀಯ ಸಂಸ್ಥೆಗಳ ಫಲಿತಾಂಶದಲ್ಲಿ ಗೋಚರವಾಗಿದೆ ಎಂದು ಅವರು ತಿಳಿಸಿದರು.
ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್ ಎಲ್ಲೆಲ್ಲಿ ಬಹುಮತ ಪಡೆದಿದೆಯೋ ಅಲ್ಲಿ ಅಧಿಕಾರ ಹಿಡಿಯಲಿದ್ದು, ಬಹುಮತ ಇಲ್ಲದ ಕಡೆಗಳಲ್ಲಿ ಜೆಡಿಎಸ್ ಜೊತೆ ಸೇರಿ ಅಧಿಕಾರ ಹಂಚಿಕೊಳ್ಳಲು ಸ್ಥಳೀಯ ನಾಯಕರಿಗೆ ಅಧಿಕಾರ ನೀಡಲಾಗಿದೆ. ಚುನಾವಣಾ ಪೂರ್ವದಲ್ಲಿಯೇ ಪ್ರತ್ಯೇಕವಾಗಿ ಚುನಾವಣೆ ಎದುರಿಸಲು ನಿರ್ಧರಿಸಲಾಗಿತ್ತು. ಅಧಿಕಾರ ಹಿಡಿಯಲು ಮೈತ್ರಿ ಅಗತ್ಯವಿದ್ದರೆ ಸ್ಥಳೀಯ  ನಾಯಕರೇ ಅದನ್ನು ತೀರ್ಮಾನಿಸಲಿ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT