ಬಸವರಾಜ್ ಹೊರಟ್ಟಿ 
ರಾಜಕೀಯ

ಬಿಜೆಪಿ ಸರ್ಕಾರಕ್ಕೆ ಜೆಡಿಎಸ್ ಬೆಂಬಲ ನೀಡಿದರೆ ಒಳ್ಳೆಯದು: ಬಸವರಾಜ್ ಹೊರಟ್ಟಿ

ರಾಜಕೀಯದಲ್ಲಿ ಯಾರು ಶಾಶ್ವತ ಶತೃವೂ ಅಲ್ಲ, ಗೆಳೆಯರೂ ಅಲ್ಲ. ರಾಜ್ಯದಲ್ಲಿ ನೆರೆ ಹಿನ್ನೆಲೆಯಲ್ಲಿ ಮರು ಚುನಾವಣೆ ಬೇಡ ಎಂಬುದಕ್ಕಾಗಿ ಕುಮಾರಸ್ವಾಮಿ ಬಿಜೆಪಿಗೆ ಬೆಂಬಲ ನೀಡಬಹುದು ಎಂದು ಜೆಡಿಎಸ್ ನಾಯಕ...

ಹುಬ್ಬಳ್ಳಿ: ರಾಜಕೀಯದಲ್ಲಿ ಯಾರು ಶಾಶ್ವತ ಶತೃವೂ ಅಲ್ಲ, ಗೆಳೆಯರೂ ಅಲ್ಲ. ರಾಜ್ಯದಲ್ಲಿ ನೆರೆ ಹಿನ್ನೆಲೆಯಲ್ಲಿ ಮರು ಚುನಾವಣೆ ಬೇಡ ಎಂಬುದಕ್ಕಾಗಿ ಕುಮಾರಸ್ವಾಮಿ ಬಿಜೆಪಿಗೆ ಬೆಂಬಲ ನೀಡಬಹುದು ಎಂದು ಜೆಡಿಎಸ್ ನಾಯಕ ಬಸವರಾಜ್ ಹೊರಟ್ಟಿ ಅವರು ಶನಿವಾರ ಹೇಳಿದ್ದಾರೆ. 

ಇಂದು ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಹೊರಟ್ಟಿ, ಸದ್ಯದ ಪರಿಸ್ಥಿತಿಯಲ್ಲಿ ಚುನಾವಣೆ ಆಗಬಾರದು. ಬಿಜೆಪಿ ಸರ್ಕಾರ ಮುಂದುವರಿಯಲಿ ಎನ್ನುವುದು ಉತ್ತಮ ವಿಚಾರ. ಬಹುತೇಕ ಜೆಡಿಎಸ್ ಶಾಸಕರು ಬಿಜೆಪಿಗೆ ಬೆಂಬಲ ಕೊಡುವುದರ ಪರವಾಗಿ ನಿಲುವು ಹೊಂದಿದ್ದಾರೆ. ಕುಮಾರಸ್ವಾಮಿಯವರು ಎಲ್ಲರ ಸಭೆ ಕರೆದು ಒಟ್ಟಾಗಿ ಚರ್ಚಿಸಿ, ತೀರ್ಮಾನಿಸಬೇಕು ಎಂದು ತಿಳಿಸಿದರು.

ಪಕ್ಷದಲ್ಲಿ ನನಗೆ ಯಾವುದೇ ಅಸಮಾಧಾನವಿಲ್ಲ. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ದೇವೆಗೌಡರ ಜೊತೆ ಮಾತನಾಡಿದ್ದೇನೆ ಎಂದು ಹೊರಟ್ಟಿ ಸ್ಪಷ್ಟಪಡಿಸಿದರು.

ಇದೇ ವೇಳೆ ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಅನರ್ಹ ಶಾಸಕರ ತ್ಯಾಗದಿಂದ, ಬಿಜೆಪಿ ಆಪರೇಷನ್ ಕಮಲ ಮಾಡಿದ್ದು ನಿಜ. ಸಿಎಂ ಯಡಿಯೂರಪ್ಪ ಅವರಿಗೆ ಅನರ್ಹ ಶಾಸಕರ ಬಗ್ಗೆ ಇರುವ ಕಾಳಜಿಗೆ ನನ್ನ ಸಹಮತವಿದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT