ಸಂಗ್ರಹ ಚಿತ್ರ 
ರಾಜಕೀಯ

ಬಿಜೆಪಿಯಿಂದ ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ಕಣಕ್ಕೆ: ಶರತ್ ಬಚ್ಚೇಗೌಡ

ಪಕ್ಷವನ್ನು ನಮ್ಮ ಕಾರ್ಯಕರ್ತರು ಬೆವರು-ರಕ್ತ ಸುರಿಸಿ ಕಟ್ಟಿ ಬೆಳೆಸಿದರು ಕ್ಷೇತ್ರದಲ್ಲಿ 3 ಸಾವಿರ ಇದ್ದ ಬಿಜೆಪಿ ಮತಗಳನ್ನು ಶಾಸಕರನ್ನು ಗೆಲ್ಲಿಸುವ ಹಂತಕ್ಕೆ ಬಂದಿದೆ ಎಂದು ಶರತ್​ ಬಚ್ಚೇಗೌಡ ತಿಳಿಸಿದ್ದಾರೆ.

ಬೆಂಗಳೂರು: ಪಕ್ಷವನ್ನು ನಮ್ಮ ಕಾರ್ಯಕರ್ತರು ಬೆವರು-ರಕ್ತ ಸುರಿಸಿ ಕಟ್ಟಿ ಬೆಳೆಸಿದರು ಕ್ಷೇತ್ರದಲ್ಲಿ 3 ಸಾವಿರ ಇದ್ದ ಬಿಜೆಪಿ ಮತಗಳನ್ನು ಶಾಸಕರನ್ನು ಗೆಲ್ಲಿಸುವ ಹಂತಕ್ಕೆ ಬಂದಿದೆ ಎಂದು ಶರತ್​ ಬಚ್ಚೇಗೌಡ ತಿಳಿಸಿದ್ದಾರೆ.

ಬೆಂ.ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಅನುಗೊಂಡನಹಳ್ಳಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳನ್ನು ದಾಖಲಿಸಿ ಕೊಂಡು ಕೋರ್ಟ್​ಗಳಿಗೆ ಅಲೆದಾಡಿ ದವರಿಗೆ ಇಂದು ವಂಚನೆಯಾಗಿದೆ.ಪಕ್ಷವನ್ನು ಕಟ್ಟಿ ಬೆಳೆಸಿದವರಿಗೆ ಇಂದು ಟಿಕೆಟ್ ಸಿಕ್ಕಿಲ್ಲ ಎಂದು ಅವರು ಆರೋಪಿಸಿದರು.

ತಂದೆ ನನ್ನ ಪರ ಬರಲ್ಲ, ನೀವೇ ನನ್ನ ಕುಟುಂಬವಾಗಿ ಕೆಲಸ ಮಾಡಿ
ಇದೇ ವೇಳೆ ನನ್ನ ತಂದೆ ಮಗನ ಪರ ಬರಲ್ಲ, ಅವರ ಬದಲು ನೀವೇ ನಿಂತು ನನ್ನ ಕುಟುಂಬವಾಗಿ ಕೆಲಸ ಮಾಡಿ ಎಂದು ಕ್ಷೇತ್ರದ ಜನರಿಗೆ ಶರತ್ ಬಚ್ಚೇಗೌಡ ಕರೆ ನೀಡಿದ್ದಾರೆ.'ಉಪ ಚುನಾವಣೆಗೆ ನೂರಕ್ಕೆ ನೂರು ನಾನೇ ಅಭ್ಯರ್ಥಿ. ಇಂದಿಗೂ ನಾನು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಒಂದು ವೇಳೆ ಟಿಕೆಟ್ ಸಿಗದಿದ್ದರೆ ಹೊಸ ಚಿಹ್ನೆ ಕ್ಷೇತ್ರಕ್ಕೆ ಬರುತ್ತದೆ.

ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಕೆಲಸ ಮಾಡಿದ ರೀತಿಯಲ್ಲಿ ಈ ಬಾರಿ ನನ್ನ ಪರ ಕೆಲಸ ಮಾಡಿ. ಗ್ರಾಮ ಮನೆ ಹೊಲ ತೋಟಗಳಿಗೆ ಹೋಗಿ ಮತದಾರರಿಗೆ ಹೊಸ ಚಿಹ್ನೆ ಗುರುತು ಮಾಡಿಕೊಡಿ. ಪಕ್ಷ ಬಿಟ್ಟು ಪ್ರಚಾರ ಮಾಡುವಾಗ ನನ್ನ ತಂದೆ ಬಚ್ಚೇಗೌಡ್ರು ನನ್ನ ಪರ ನಿಲ್ಲಲು ಸಾಧ್ಯವಾಗಲ್ಲ. ನೀವೇ ನನ್ನ ಕುಟುಂಬವಾಗಿ ಕೆಲಸ ಮಾಡಿ ಎಂದು ಕಾರ್ಯಕರ್ತರಿಗೆ ಮತ್ತು ಜನರಿಗೆ ಕರೆ ನೀಡಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT