ಸಿದ್ದರಾಮಯ್ಯ ಹಾಗೂ ಶ್ರೀನಿವಾಸ ಪ್ರಸಾದ್ 
ರಾಜಕೀಯ

ಸಮ್ಮಿಶ್ರ ಸರ್ಕಾರದ ಮೊದಲ ಅತೃಪ್ತ ಶಾಸಕ ಸಿದ್ದರಾಮಯ್ಯ: ವಿ  ಶ್ರೀನಿವಾಸ್​ ಪ್ರಸಾದ್​​​

ಯಡಿಯೂರಪ್ಪ ಮಾತನಾಡಿರುವುದರಲ್ಲಿ ಯಾವುದೇ ತಪ್ಪಿಲ್ಲ. ಅವರ ಮನಸ್ಸಿನಲ್ಲಿರುವುದನ್ನ ಹೇಳಿದ್ದಾರೆಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ.  

ಚಾಮರಾಜನಗರ: ಯಡಿಯೂರಪ್ಪ ಮಾತನಾಡಿರುವುದರಲ್ಲಿ ಯಾವುದೇ ತಪ್ಪಿಲ್ಲ. ಅವರ ಮನಸ್ಸಿನಲ್ಲಿರುವುದನ್ನ ಹೇಳಿದ್ದಾರೆಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ. 

ಬಿಎಸ್​ವೈ ಮಾತನಾಡಿರುವುದರಲ್ಲಿ ತಪ್ಪೇನಿಲ್ಲ: ಆಡಿಯೋ ವೈರಲ್​ ಬಗ್ಗೆ ವಿ.ಶ್ರೀನಿವಾಸ ಪ್ರಸಾದ್ ಪ್ರತಿಕ್ರಿಯೆನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಿಯೋ ಅಸಲಿಯೋ,ನಕಲಿಯೋ ಎಂದು ಜಿಜ್ಞಾಸೆಯಿದೆ. ಒಂದು ವೇಳೆ ಅವರು ಮಾತನಾಡಿದ್ದರೂ ತಪ್ಪೇನಿಲ್ಲ. ಅವರು ಯಾರಿಂದ ಸರ್ಕಾರ ರಚಿಸಿದ್ದೇವೆ ಎಂದು ಹೇಳಿದ್ದಾರೆ. ರಾಜೀನಾಮೆ ನೀಡಿದ12 ಮಂದಿ ಅನರ್ಹ ಶಾಸಕರಲ್ಲ. ಅವರು ಅತೃಪ್ತ ಶಾಸಕರು. ದೋಸ್ತಿ ಸರ್ಕಾರದ ಮೊದಲ ಅತೃಪ್ತ ಶಾಸಕ ಅಂದರೆ ಅದು ಸಿದ್ದರಾಮಯ್ಯ. ಮೈತ್ರಿ ಸರ್ಕಾರದ ವಿರುದ್ಧ ಮೊದಲು ಅತೃಪ್ತಿ ವ್ಯಕ್ತಪಡಿಸಿದ್ದೇ ಅವರು ಎಂದು ಲೇವಡಿ ಮಾಡಿದರು.

ಅತೃಪ್ತ ಶಾಸಕರು ರಾಜೀನಾಮೆ ನೀಡದಿದ್ದರೇ ಸರ್ಕಾರ ಎಲ್ಲಿ ರಚನೆಯಾಗುತ್ತಿತ್ತು. ಆದ್ದರಿಂದ,ಬಿಎಸ್​ವೈ ಅವರು ಅತೃಪ್ತ ಶಾಸಕರನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕು ಎಂದು ಹೇಳಿರುವುದಲ್ಲಿ ಯಾವುದೇ ತಪ್ಪಿಲ್ಲ ಎಂದರು.

ಸಿದ್ದರಾಮಯ್ಯ ಕಾಡಿ-ಬೇಡಿ ವಿಪಕ್ಷ ನಾಯಕರಾಗಿದ್ದಾರೆ. ಕಾಂಗ್ರೆಸ್ ಸೋತು ಸುಣ್ಣವಾಗಿರುವುದರಿಂದ ಆಡಿಯೋ ವೈರಲ್ ಪ್ರಕರಣದಲ್ಲಿ ರಾಜಕೀಯ ಮಾಡುತ್ತಿದೆ. ಅವರಿಗೆ ಬೇರೆ ಯಾವ ವಿಷಯಗಳು ಇಲ್ಲ. ಉಪಚುನಾವಣೆ ಬಳಿಕ ಸರ್ಕಾರ ಬೀಳಲಿದೆ ಹಾಗೂ ಮಧ್ಯಂತರ ಚುನಾವಣೆ ನಡೆಯಲಿದೆ ಎಂಬ ಪ್ರತಿಪಕ್ಷಗಳ ಮಾತಿನಲ್ಲಿ ಹುರುಳಿಲ್ಲ. ಮಧ್ಯಂತರ ಚುನಾವಣೆ ಎಂಬುದು ಕನಸು ಎಂದರು. ಕರ್ನಾಟಕದ ಅನರ್ಹ ಶಾಸಕರ ಪ್ರಕರಣವನ್ನು ಸುಪ್ರೀಂಕೋರ್ಟ್ ಗಂಭೀರವಾಗಿ ಪರಿಗಣಿಸಿ ನ್ಯಾಯದ ಪರ ತೀರ್ಪು ನೀಡುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ವರದಿ: ಗೂಳಿಪುರ ನಂದೀಶ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT