ಯಡಿಯೂರಪ್ಪ 
ರಾಜಕೀಯ

ಆಡಿಯೋ ಲೀಕ್ ಅಸ್ತ್ರ ಹಿಡಿದ ವಿಪಕ್ಷಗಳು: ಜಗ್ಗದ ಸಿಎಂ ಯಡಿಯೂರಪ್ಪ

ಮೈತ್ರಿ ಸರ್ಕಾರ ಕುಸಿದು ಬೀಳುವಲ್ಲಿ ಕೇಂದ್ರೀಯ ನಾಯಕತ್ವದ ಕೈವಾಡವಿದೆ ಎಂದು ಹೇಳಲಾಗುತ್ತಿರುವ ಕುರಿತ ಆಡಿಯೋ ಲೀಕ್'ನ್ನೇ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಅಸ್ತ್ರವಾಗಿಸಿಕೊಂಡು ಹರಿಹಾಯುತ್ತಿದ್ದು, ಇದಾವುದಕ್ಕೂ ಜಗ್ಗದ ಬಿಜೆಪಿ ಆರೋಪಗಳನ್ನು ಅಲ್ಲಗೆಳೆಯುತ್ತಿದೆ. 

ಬೆಂಗಳೂರು: ಮೈತ್ರಿ ಸರ್ಕಾರ ಕುಸಿದು ಬೀಳುವಲ್ಲಿ ಕೇಂದ್ರೀಯ ನಾಯಕತ್ವದ ಕೈವಾಡವಿದೆ ಎಂದು ಹೇಳಲಾಗುತ್ತಿರುವ ಕುರಿತ ಆಡಿಯೋ ಲೀಕ್'ನ್ನೇ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಅಸ್ತ್ರವಾಗಿಸಿಕೊಂಡು ಹರಿಹಾಯುತ್ತಿದ್ದು, ಇದಾವುದಕ್ಕೂ ಜಗ್ಗದ ಬಿಜೆಪಿ ಆರೋಪಗಳನ್ನು ಅಲ್ಲಗೆಳೆಯುತ್ತಿದೆ. 

ಆಡಿಯೋ ಲೀಕ್"ನ್ನು ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ಪ್ರಯೋಗಿಸಲು ಕಾಂಗ್ರೆಸ್ ಯತ್ನ ನಡೆಸುತ್ತಿದ್ದು, ಬಿಜೆಪಿ ಸರ್ಕಾರದ ವಿರುದ್ಧ ಇಂದು ರಾಜ್ಯದಾದ್ಯಂತ ತೀವ್ರ ಪ್ರತಿಭಟನೆ ನಡೆಸುತ್ತಿದೆ. ಅಲ್ಲದೆ, ಪ್ರಕರಣ ಹಿಡಿದು ಸುಪ್ರೀಂಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದೆ. 

ಈ ನಡುವೆ ಮಾತನಾಡಿರುವ ಮಾಜಿ ಪ್ರಧಾನಮಂತ್ರಿ, ಜೆಡಿಎಸ್ ರಾಷ್ಟ್ರಾಧ್ಯಕ್ಷ ದೇವೇಗೌಡ ಅವರು, ಕೇಂದ್ರ ಸರ್ಕಾರದ ಆಣತಿಯಂತೆ ಉತ್ತರಾಖಂಡ ಮುಖ್ಯಮಂತ್ರಿ ವಿರುದ್ಧ ಶಾಸಕರ ಕುದುರೆ ವ್ಯಾಪಾರ ಆರೋಪದಡಿ ಸಿಬಿಐ ಪ್ರಕರಣ ದಾಖಲಿಸಿತ್ತು. ಅದೇ ಮಾನದಂಡವನ್ನು ಕರ್ನಾಟಕದಲ್ಲೂ ಅಳವಡಿಸಬೇಕು ಎಂದು ಆಗ್ರಹಿಸಿದ್ದಾರೆ. 

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಒಂದೇ ಮಾನದಂಡ ಅನುಸರಿಸುವುದು ವಿವೇಕಯುತ ಕ್ರಮವಾಗುತ್ತದೆ. ಆದರೆ, ಈ ಬಗ್ಗೆ ಕೇಂದ್ರ ಇಬ್ಬಗೆ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ. 

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದಿರುವುದೇ ಕೆಟ್ಟ ನಡವಳಿಕೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಅನರ್ಹ ಶಾಸಕರ ಕುರಿತು ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಜೆಡಿಎಸ್ ಮುಂದಿನ ನಿರ್ಧಾರ ತೆಗೆದುಕೊಳ್ಳಲಿದೆ ಎಂದಿದ್ದಾರೆ. 

ಯಡಿಯೂರಪ್ಪ, ಶಾ ಅವರು ನೀಡಿರುವ ಹೇಳಿಕೆ ಆಡಿಯೋ ವೈರಲ್ ವಿಚಾರ ಪ್ರಧಾನಿ ಹಾಗೂ ಅಮಿತ್ ಶಾ ಅವರಿಗೂ ಗೊತ್ತಿದೆ. ರಾಜ್ಯ ಕಾಂಗ್ರೆಸ್ ನವರು ರಾಜ್ಯಪಾಲರು ಮತ್ತು ರಾಷ್ಟ್ರಪತಿ ಅವರಿಗೂ ದೂರು ನೀಡುವುದಾಗಿ ಹೇಳಿದ್ದಾರೆ. ಅನರ್ಹ ಶಾಸಕರ ಕುರಿತು ಸೋಮವಾರ ಸುಪ್ರೀಂಕೋರ್ಟ್'ನಲ್ಲಿ ತೀರ್ಪು ಬರುವ ನಿರೀಕ್ಷೆ ಇದ್ದು, ಈ ತೀರ್ಪು ನೋಡಿ ಜೆಡಿಎಸ್ ಮುಂದಿನ ನಿರ್ಧಾರ ಮಾಡಲಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT