ಜನಾರ್ಧನ ಪೂಜಾರಿ 
ರಾಜಕೀಯ

ಸಿದ್ದರಾಮಯ್ಯ ಕಾಂಗ್ರೆಸ್ ಗೆ ಶನಿ ಇದ್ದಂತೆ: ಜನಾರ್ಧನ ಪೂಜಾರಿ

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಕಾಂಗ್ರೆಸ್ ಪಕ್ಷಕ್ಕೆ ಶನಿ ಇದ್ದ ಹಾಗೆ. ಸಿದ್ಧರಾಮಯ್ಯ ಕಾಂಗ್ರೆಸ್ ಪಕ್ಷವನ್ನು ಸರ್ವನಾಶ ಮಾಡಿಯೇ ಹೋಗುತ್ತಾರೆ ಎಂದು ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಬಿ. ಜನಾರ್ಧನ ಪೂಜಾರಿ ಟೀಕಿಸಿದ್ದಾರೆ.

ಮಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಕಾಂಗ್ರೆಸ್ ಪಕ್ಷಕ್ಕೆ ಶನಿ ಇದ್ದ ಹಾಗೆ. ಸಿದ್ಧರಾಮಯ್ಯ ಕಾಂಗ್ರೆಸ್ ಪಕ್ಷವನ್ನು ಸರ್ವನಾಶ ಮಾಡಿಯೇ ಹೋಗುತ್ತಾರೆ ಎಂದು ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಬಿ. ಜನಾರ್ಧನ ಪೂಜಾರಿ ಟೀಕಿಸಿದ್ದಾರೆ.

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ಧರಾಮಯ್ಯ ಅವರಿಂದಲೇ ರಾಜ್ಯದಲ್ಲಿ ಕಾಂಗ್ರೆಸ್ ಈ ಮಟ್ಟಕ್ಕೆ ಬರಲು ಕಾರಣವಾಗಿದೆ. ಸಿದ್ಧರಾಮಯ್ಯ ಅವರಿಗೆ ಯಾವುದೇ ಜವಾಬ್ದಾರಿ ನೀಡಬಾರದು ಎಂದು ಹಲವು ಬಾರಿ ಹೈಕಮಾಂಡ್ ಗೆ ತಾನು ಪತ್ರ ಬರೆದಿದ್ದೇನೆ. ಸಿದ್ಧರಾಮಯ್ಯ ಕಾಂಗ್ರೆಸ್ ನಲ್ಲಿ ಇರುವ ತನಕ ಪಕ್ಷಕ್ಕೆ ಅವರು ಶನಿಯೆ ಎಂದು ದೂರಿದರು.

ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿ ಸ್ಥಾನ ಆಯ್ಕೆ ಸಂಬಂಧ ತನ್ನ ಬಳಿ ಚರ್ಚೆ ನಡೆಸಲಾಗಿದೆ ಎನ್ನುವ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿಕೆಯನ್ನು ಖಂಡಿಸಿದ ಪೂಜಾರಿ, ಅಭ್ಯರ್ಥಿಗಳ ಆಯ್ಕೆ ಸಂಬಂಧ ತನ್ನ ಬಳಿ ಯಾರೂ ಯಾವ ಚರ್ಚೆಯನ್ನೂ ನಡೆಸಿಲ್ಲ. ಜಿಲ್ಲಾಧ್ಯಕ್ಷರು ಕೂಡಲೇ ಈ ಬಗ್ಗೆ ಜನತೆಯಲ್ಲಿ ಕ್ಷಮೆಯಾಚಿಸಬೇಕು ಎಂದು ಅವರು ಇದೇ ಸಂದರ್ಭದಲ್ಲಿ ಒತ್ತಾಯಿಸಿದರು.

ನನ್ನಲ್ಲಿ ಸಮಾಲೋಚನೆ ಮಾಡಬೇಕೆಂದು ಯಾರಲ್ಲೂ ಹೇಳಿಲ್ಲ. ಈ ರೀತಿ ಸುಳ್ಳು ಹೇಳಬಾರದು. ಸತ್ಯಕ್ಕೆ ದೂರವಾದ ಮಾತನ್ನು ಕಾಂಗ್ರೆಸ್‌ನವರು ಹೇಳಬಾರದು. ಕಾಂಗ್ರೆಸ್‌ನವರು ಪೂಜಾರಿ ಬಳಿ ಸಮಾಲೋಚನೆ ಮಾಡುವುದಿಲ್ಲ. ಅದಕ್ಕಾಗಿ ಪೂಜಾರಿ ಕಣ್ಣೀರು ಸುರಿಸಿ ಕುಳಿತುಕೊಳ್ಳುವುದಿಲ್ಲ. ಏನು ಮಾಡಬೇಕೆಂದು ನನಗೆ ಗೊತ್ತಿದೆ ಎಂದರು.

ದಕ್ಷಿಣ ಕನ್ನಡ ಮತ್ತು ಉಡುಪಿ ವಿಧಾನಸಭೆ, ಲೋಕಸಭೆಯಲ್ಲಿ ಕಾಂಗ್ರೆಸ್ ಸೋಲಿಗೆ ಹಿರಿಯರ ಕಡೆಗಣನೆ ಕಾರಣ. ಈ ಮಾತು ನೂರಕ್ಕೆ‌ ನೂರು ಸತ್ಯ, ಇದರಲ್ಲಿ ಸ್ವಲ್ಪವೂ ಸುಳ್ಳಿಲ್ಲ" ಎಂದು ಘಂಟಾಘೋಷವಾಗಿ ನುಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT