ಬಿಎಸ್ ಯಡಿಯೂರಪ್ಪ 
ರಾಜಕೀಯ

ಯು.ಬಿ.ಬಣಕಾರ್, ಬಿ.ಸಿ.ಪಾಟೀಲ್ ಜೋಡೆತ್ತುಗಳು: ಸಿಎಂ ಯಡಿಯೂರಪ್ಪ

ಬಿ.ಸಿ ಪಾಟೀಲ್ ಮತ್ತು ಯು.ಬಿ ಬಣಕಾರ್​ ಒಂದಾದ ಬಳಿಕ ಹಿರೇಕೆರೂರು ಕ್ಷೇತ್ರಕ್ಕೆ ನಾನು ಬರುವ ಅಗತ್ಯವೇ ಇಲ್ಲ. ಉಪ ಚುನಾವಣೆ ಪ್ರಚಾರಕ್ಕೆ ಇವರಿಬ್ಬರೇ ಜೋಡತ್ತು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು​ ಹಾಡಿ ಹೊಗಳಿದ್ದಾರೆ.

ಹಾವೇರಿ: ಬಿ.ಸಿ ಪಾಟೀಲ್ ಮತ್ತು ಯು.ಬಿ ಬಣಕಾರ್​ ಒಂದಾದ ಬಳಿಕ ಹಿರೇಕೆರೂರು ಕ್ಷೇತ್ರಕ್ಕೆ ನಾನು ಬರುವ ಅಗತ್ಯವೇ ಇಲ್ಲ. ಉಪ ಚುನಾವಣೆ ಪ್ರಚಾರಕ್ಕೆ ಇವರಿಬ್ಬರೇ ಜೋಡತ್ತು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು​ ಹಾಡಿ ಹೊಗಳಿದ್ದಾರೆ.

ಇಂದು ಜಿಲ್ಲೆಯಲ್ಲಿ ನಡೆದ ಕೃತಜ್ಞತಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ, ಬಿ.ಸಿ ಪಾಟೀಲ್ ಮತ್ತು ಯು.ಬಿ ಬಣಕಾರ್​ ಒಟ್ಟಾಗಿದ್ದರೆ ಇವರ ಮುಂದೆ ಯಾವುದೇ ಶಕ್ತಿ ಕೆಲಸ ಮಾಡಲು ಸಾಧ್ಯವಿಲ್ಲ. ಬೇರೆ ಯಾವುದೇ ಪಕ್ಷ ಇಲ್ಲಿ ತಲೆ ಎತ್ತುವುದಕ್ಕೆ ಬಿಡುವುದಿಲ್ಲ ಎಂದು ಎಲ್ಲರೂ ಕೈ ಎತ್ತಿ ಹೇಳಿ ಎಂದರು.

ಯು.ಬಿ. ಬಣಕಾರ್ ಯಾವುದೇ ಕಾರಣಕ್ಕೂ ತಲೆಬಗ್ಗಿಸದಂತೆ ನೋಡಿಕೊಳ್ಳುವ ಮೂಲಕ ಗೌರವದಿಂದ ನಡೆಸಿಕೊಳ್ಳುತ್ತೇನೆ ಎಂದು ಹೇಳುವ ಮೂಲಕ ಉಪಚುನಾವಣೆಯಲ್ಲಿ ಬಿ.ಸಿ. ಪಾಟೀಲ್​ ಅವರಿಗೆ ಟಿಕೆಟ್​ ಕೊಡುವುದಾಗಿ ಸಿಎಂ ಪರೋಕ್ಷವಾಗಿ ತಿಳಿಸಿದರು.

ಶಿಕಾರಿಪುರ ಸೇರಿ ಹಾವೇರಿ ಜಿಲ್ಲೆಗೆ ಒಟ್ಟು 2,829 ಕೋಟಿ ರೂ. ಅನುದಾನ ಒದಗಿಸಿದ್ದೇನೆ. ಇನ್ನು ಮೂರು ದಿನಗಳಲ್ಲಿ ಹಾವೇರಿ ಜಿಲ್ಲೆಗೆ ಇನ್ನೂ ನೂರು ಕೋಟಿ ರೂ. ಅನುದಾನ ನೀಡಲಿದ್ದೇನೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT