ಜೆಡಿಎಸ್ ಶಾಸಕ ಬಂಡೆಪ್ಪ ಕಾಶೆಂಪುರ್ 
ರಾಜಕೀಯ

ಗೆಲ್ಲುವ ಕ್ಷೇತ್ರಗಳತ್ತ ಮಾತ್ರವೇ ಜೆಡಿಎಸ್ ಗಮನಹರಿಸಬೇಕು: ಜೆಡಿಎಸ್ ಶಾಸಕ ಬಂಡೆಪ್ಪ ಕಾಶೆಂಪುರ್

ಉಪಚುನಾವಣೆ ವೇಳೆ ಗೆಲ್ಲುವ ಕ್ಷೇತ್ರಗಳತ್ತ ಮಾತ್ರವೇ ಜೆಡಿಎಸ್ ಗಮನಹರಿಸಬೇಕೆಂದು ಜೆಡಿಎಸ್ ಶಾಸಕ ಬಂಡೆಪ್ಪ ಕಾಶೆಂಪುರ್ ಹೇಳಿದ್ದಾರೆ. 

ಕಲಬುರಗಿ: ಉಪಚುನಾವಣೆ ವೇಳೆ ಗೆಲ್ಲುವ ಕ್ಷೇತ್ರಗಳತ್ತ ಮಾತ್ರವೇ ಜೆಡಿಎಸ್ ಗಮನಹರಿಸಬೇಕೆಂದು ಜೆಡಿಎಸ್ ಶಾಸಕ ಬಂಡೆಪ್ಪ ಕಾಶೆಂಪುರ್ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಉಪಚುನಾವಣೆಗೆ ಎಲ್ಲಾ ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ನಿಲ್ಲಿಸುವತ್ತ ಗಮನಹರಿಸುವ ಬದಲು, ಗೆಲ್ಲುವ ಕ್ಷೇತ್ರಗಳತ್ತ ಮಾತ್ರವೇ ಪಕ್ಷ ಗಮನಹರಿಸಬೇಕು ಎಂದು ಹೇಳಿದ್ದಾರೆ. 

15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, ಈ 15 ಕ್ಷೇತ್ರಗಳಲ್ಲಿ 3 ಕ್ಷೇತ್ರಗಳಲ್ಲಿ 2018ರ ವಿಧಾನಸಭಾ ಚುನಾವಣೆ ವೇಳೆ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಹೀಗಾಗಿ ಚಿಕ್ಕಬಳ್ಳಾಪುರ ಮತ್ತು ಯಶವಂತಪುರ ಸೇರಿ 2-3 ಕ್ಷೇತ್ರಗಳಲ್ಲಿ ಗೆಲ್ಲುವ ಅಭ್ಯರ್ಥಿಗಳನ್ನು ನಿಲ್ಲಿಸಬೇಕೆಂದು ಹೇಳಿದ್ದಾರೆ. 

ಉಪಚುನಾವಣೆ ಹಿನ್ನಲೆಯಲ್ಲಿ ಚಿಕ್ಕಬಳ್ಳಾಪುರದಲ್ಲಿ ಶನಿವಾರ ಸಭೆಯನ್ನು ಆಯೋಜಿಸಲಾಗಿದ್ದು, ಸಭೆ ವೇಳೆ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಲಾಗುತ್ತದೆ. ಬಿಜೆಪಿ ಸರ್ಕಾರವನ್ನು ಉರುಳಿಸುವ ಪ್ರಯತ್ನಗಳನ್ನು ಮಾಡುತ್ತಿಲ್ಲ. ಮಧ್ಯಂತರ ಚುನಾವಣೆ ಪರ ನಾನಿಲ್ಲ. ಮತ್ತೆ ಮುಖ್ಯಮಂತ್ರಿಯಾಗುವ ಉದ್ದೇಶದಿಂದಲೇ ಸಿದ್ದರಾಮಯ್ಯ ಅವರು ಸರ್ಕಾರ ಉರುಳಿಸಲು ಯತ್ನಿಸುತ್ತಿದ್ದಾರೆಂಬುದು ಎಲ್ಲರಿಗೂ ಗೊತ್ತಿರುವ ವಿಚಾರ ಎಂದು ತಿಳಿಸಿದ್ದಾರೆ. 

ಬಿಜೆಪಿ ಸರ್ಕಾರವನ್ನು ಕಾಂಗ್ರೆಸ್ ಉರುಳಿಸಲು ಯತ್ನಿಸಿದರೆ, ಜೆಡಿಎಸ್ ರಾಜ್ಯ ಸರ್ಕಾರವನ್ನು ಬೆಂಬಲಿಸುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಇಷ್ಟು ಬೇಗ ಈ ಕುರಿತು ಹೇಳಿಕೆ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT