ರಾಜಕೀಯ

ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಶರತ್ ಬಚ್ಚೇಗೌಡ, ಎಂಟಿಬಿಗೆ ಢವಢವ!

Vishwanath S

ಹೊಸಕೋಟೆ: ಬಿಜೆಪಿ ವಿರುದ್ಧ ಬಂಡಾಯವೆದ್ದಿರುವ ಶರತ್ ಬಚ್ಚೇಗೌಡ ಸ್ವಾಭಿಮಾನಿ ಅಭಿಯಾನದ ಮೂಲಕ ಭರ್ಜರಿ ರೋಡ್ ಶೋ ಬಳಿಕ ಪಕ್ಷೇತ್ತರನಾಗಿ ನಾಮಪತ್ರ ಸಲ್ಲಿಸಿದ್ದಾರೆ. 

ಅನರ್ಹ ಶಾಸಕ ಎಂಟಿಬಿ ನಾಗರಾಜ್ ಬಿಜೆಪಿಯಿಂದ ಕಣಕ್ಕಿಳಿಯುತ್ತಿರುವುದರಿಂದ ಬಿಜೆಪಿ ಪರಾಚಿತ ಅಭ್ಯರ್ಥಿ ಶರತ್ ಬಚ್ಚೇಗೌಡ ಪಕ್ಷೇತ್ತರನಾಗಿ ಹೊಸಕೋಟೆಯಿಂದ ಕಣಕ್ಕಿಳಿಯುತ್ತಿದ್ದಾರೆ.

ಇಂದು ಬೆಳಗ್ಗೆಯಿಂದ ಭರ್ಜರಿ ರೋಡ್ ಶೋ ಮಾಡಿದರು. ಅಪಾರ ಸಂಖ್ಯೆಯಲ್ಲಿ ಶರತ್ ಬಚ್ಚೇಗೌಡ ಅವರ ಅಭಿಮಾನಿಗಳು, ಕಾರ್ಯಕರ್ತರು ಆಗಮಿಸಿ ತಮ್ಮ ನಾಯಕನಿಗೆ ಸಾಥ್ ನೀಡಿದರು. 

ಶರತ್ ಬಚ್ಚೇಗೌಡ ಚುನಾವಣಾಧಿಕಾರಿಗೆ ನಾಗರಾಜ್ ಅವರಿಗೆ ನಾಮಪತ್ರ ಸಲ್ಲಿಸಿದ್ದರು. 

SCROLL FOR NEXT