ಪ್ರಕಾಶ್ ಹುಕ್ಕೇರಿ 
ರಾಜಕೀಯ

ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳು: ಕಾಗವಾಡದಿಂದ ಪ್ರಕಾಶ್ ಹುಕ್ಕೇರಿ-ಅಥಣಿಯಿಂದ ರಾಜು ಕಾಗೆ 

ಅನರ್ಹ ಶಾಸಕರಾದ ಮಹೇಶ್ ಕುಮಟಳ್ಳಿ ಮತ್ತು ಶ್ರೀಮಂತ ಪಾಟೀಲ್ ಅವರ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಾಂಗ್ರೆಸ್ ಪಕ್ಷ ಫೈನಲ್ ಮಾಡಿದೆ, ಕಾಗವಾಡದಿಂದ ಪ್ರಕಾಶ್ ಹುಕ್ಕೇರಿ ಮತ್ತು ಅಥಣಿಯಿಂದ ರಾಜು ಕಾಗೆ ಅವರಿಗೆ ಟಿಕೆಟ್ ಫೈನಲ್ ಮಾಡಿದೆ.

ಬೆಳಗಾವಿ: ಅನರ್ಹ ಶಾಸಕರಾದ ಮಹೇಶ್ ಕುಮಟಳ್ಳಿ ಮತ್ತು ಶ್ರೀಮಂತ ಪಾಟೀಲ್ ಅವರ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಾಂಗ್ರೆಸ್ ಪಕ್ಷ ಫೈನಲ್ ಮಾಡಿದೆ, ಕಾಗವಾಡದಿಂದ ಪ್ರಕಾಶ್ ಹುಕ್ಕೇರಿ ಮತ್ತು ಅಥಣಿಯಿಂದ ರಾಜು ಕಾಗೆ ಅವರಿಗೆ ಟಿಕೆಟ್ ಫೈನಲ್ ಮಾಡಿದೆ.

ರಾಜುಕಾಗೆ ಕಾಗವಾಡ ಕ್ಷೇತ್ರದಿಂದ 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು,  ಜೊತೆಗೆ ಅಥಣಿಯಲ್ಲೂ ಜನಪ್ರಿಯತೆ ಪಡೆದಿದ್ದರು, ಸ್ಥಳೀಯ ಸಂಸ್ಥಗಳು ಹಾಗೂ ಸಹಕಾರ ಸಂಘಟನೆಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ.

ಕಾಗವಾಡ ಕ್ಷೇತ್ರದಿಂದ ತಮ್ಮ ತಂದೆ ಪ್ರಕಾಶ್ ಹುಕ್ಕೇರಿ ಅವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡುತ್ತದೆ ಎಂದು ಚಿಕ್ಕೋಡಿ ಶಾಸಕ ಗಣೇಶ್ ಹುಕ್ಕೇರಿ ಹೇಳಿದ್ದರು. ಪ್ರಕಾಶ್ ಹುಕ್ಕೇರಿ ಅವರಿಂದ ಹೆಚ್ಚಿನ ಒತ್ತಾಯ ಬಂದಿದ್ದರಿಂದ, ಹೈಕಮಾಂಡ್ ಗುರುವಾರ ತಡರಾತ್ರಿ, ಅಥಣಿ ಗೆ ರಾಜು ಕಾಗೆಗೆ ಟಿಕೆಟ್ ನೀಡಿ, ಕಾಗವಾಡಕ್ಕೆ ಪ್ರಕಾಶ್ ಹುಕ್ಕೇರಿ ಅವರನ್ನು ಫೈನಲ್ ಮಾಡಿದೆ. 

ಕಾಗವಾಡ ಚಿಕ್ಕೋಡಿ ಲೋಕಸಭಾ ವ್ಯಾಪ್ತಿಗೆ ಸೇರುವುದರಿಂದ ಈ ಭಾಗದಲ್ಲಿ ಹುಕ್ಕೇರಿ ಕುಟುಂಬಕ್ಕೆ ಅಪಾರವಾದ ಜನ ಬೆಂಬಲವಿದೆ, ಹೀಗಾಗಿ  ಪ್ರಕಾಶ್ ಹುಕ್ಕೇರಿಗೆ ಕಾಗವಾಡ ಟಿಕೆಟ್ ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT