ಲಕ್ಷ್ಮಣ ಸವದಿ 
ರಾಜಕೀಯ

ನಾನು ಪಕ್ಷದ ಶಿಸ್ತಿನ ಸಿಪಾಯಿ, ಹೈಕಮಾಂಡ್ ನನ್ನ ಕೈಬಿಡುವುದಿಲ್ಲ: ಸವದಿ

ಪಕ್ಷ ಹೇಗೆ ಹೇಳುತ್ತದೆಯೋ ಹಾಗೆ ಅದನ್ನು ನಾನು ಮಾಡುತ್ತೇನೆ. ಪಕ್ಷದ ಪರವಾಗಿ ಉಪಚುನಾವಣೆಯಲ್ಲಿ ಕೆಲಸ ಮಾಡುತ್ತೇನೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

ಬೆಂಗಳೂರು: ಪಕ್ಷ ಹೇಗೆ ಹೇಳುತ್ತದೆಯೋ ಹಾಗೆ ಅದನ್ನು ನಾನು ಮಾಡುತ್ತೇನೆ. ಪಕ್ಷದ ಪರವಾಗಿ ಉಪಚುನಾವಣೆಯಲ್ಲಿ ಕೆಲಸ ಮಾಡುತ್ತೇನೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ನಮ್ಮಕಾರ್ಯಕರ್ತರು 25,000 ಜನರನ್ನು ಸೇರಿಸಿ ಪಾದಯಾತ್ರೆ ಮಾಡಬೇಕೆಂದು ಉದ್ದೇಶಿಸಿದ್ದರು. ಕಾರ್ಯಕರ್ತರಿಗೆ ಅಸಮಾಧಾನ ಸಹಜವಾಗಿದೆ. ಆದರೆ, ನಾನು ಪಕ್ಷದ ಶಿಸ್ತಿನ ಸಿಪಾಯಿ. ಅವರಿಗೆ ಪಾದಯಾತ್ರೆ ಮಾಡುವುದು ಬೇಡ ಎಂದು ತಡೆದಿದ್ದೇನೆ ಎಂದು ಅವರು ತಿಳಿಸಿದರು.

ಅಲ್ಲದೆ, ಅಥಣಿ ಮತ್ತು ಕಾಗವಾಡದಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಕೆಲಸ ಮಾಡುತ್ತೇನೆ. ನಾನು ಶಾಸಕನೇ ಅಲ್ಲದವನನ್ನು ಪಕ್ಷದ ಹೈ ಕಮಾಂಡ್ ಗುರುತಿಸಿ ಮಂತ್ರಿ ಮಾಡಿದ್ದಾರೆ. ಮಂತ್ರಿ ಮಾಡುವಾಗಲೇ ಅವರು ಆಲೋಚನೆ ಮಾಡಿಯೇ ನಿರ್ಧಾರ ಮಾಡಿರುತ್ತಾರೆ. ನನ್ನನ್ನು ಸಚಿವ ಸಂಪುಟದಲ್ಲಿ ಮುಂದುವರಿಸಬೇಕು ಎಂದಾದರೆ ಯಾವುದಾದರೂ ರೂಪದಲ್ಲಿ ಮುಂದುವರಿಸುತ್ತಾರೆ. ಇಲ್ಲವಾದರೆ ಇಲ್ಲ. ಅವರು ಯಾವ ನಿರ್ಧಾರ ತೆಗೆದುಕೊಂಡರೂ ಒಪ್ಪವುದು ಅನಿವಾರ್ಯವಾಗಿದೆ. ಒಂದು ಕ್ಷೇತ್ರ ಬಿಟ್ಟು ಕೊಟ್ಟ ಮೇಲೆ ಇನ್ನೊಂದು ಪರ್ಯಾಯ ಕ್ಷೇತ್ರ ಅನಿವಾರ್ಯವಾಗಿದೆ ಎಂದು ಅವರು ಹೇಳಿದರು.

ವಿಧಾನಸಭಾ ಚನಾವಣೆಯಲ್ಲಿ ಅಥಣಿ ಕ್ಷೇತ್ರದಲ್ಲಿ ಸೋತ ಲಕ್ಷ್ಮಣ ಸವದಿ, ಮಹೇಶ್​ ಕುಮಟಹಳ್ಳಿ ರಾಜೀನಾಮೆಯಿಂದ ತೆರವಾದ ಕ್ಷೇತ್ರದಲ್ಲಿ ಸ್ಪರ್ಧಿಸಲು ಉಮೇದು ತೋರಿದ್ದರು. ಆದರೆ, ಈಗ ಪಕ್ಷ ಟಿಕೆಟ್​ ಅನ್ನು ಬಿಜೆಪಿಗೆ ಸೇರ್ಪಡನೆಗೊಂಡ ಅನರ್ಹ ಶಾಸಕ ಮಹೇಶ್​ ಕುಮಟಳ್ಳಿಗೆ ನೀಡಿದ್ದು, ಡಿಸಿಎಂ ಸವದಿ ಬೇಸರಕ್ಕೆ ಕಾರಣವಾಗಿದೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT