ಉಪಸಭಾಧ್ಯಕ್ಷ ಕೃಷ್ಣಾರೆಡ್ಡಿ 
ರಾಜಕೀಯ

ಭೂ ಕಬಳಿಕೆ ಮಾಡಿಲ್ಲ: ಆರೋಪ ಮಾಡಿರುವವರ ಮೇಲೆ ಮಾನನಷ್ಟ ಮೊಕದ್ದಮೆ- ಉಪಸಭಾಧ್ಯಕ್ಷ ಕೃಷ್ಣಾರೆಡ್ಡಿ 

ಸರ್ಕಾರಿ ಭೂಮಿ ಕಬಳಿಕೆ ಮಾಡಿರುವುದಾಗಿ ತಮ್ಮ ಮೇಲೆ ಬಿಜೆಪಿ ವಕ್ತಾರ ಎನ್.ಆರ್ ರಮೇಶ್ ಮಾಡಿರುವ ಆರೋಪ ಆಧಾರರಹಿತವಾಗಿದ್ದು,  ಅವರ ವಿರುದ್ಧ ಸದನದಲ್ಲಿ ಹಕ್ಕುಚ್ಯುತಿ ಮಂಡಿಸಿ ನ್ಯಾಯಾಲಯದಲ್ಲಿ ಮಾನನಷ್ಟ  ಮತ್ತು ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ವಿಧಾನಸಭೆ ಉಪಸಭಾಧ್ಯಕ್ಷ ಕೃಷ್ಣಾ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ. 

ಬೆಂಗಳೂರು: ಸರ್ಕಾರಿ ಭೂಮಿ ಕಬಳಿಕೆ ಮಾಡಿರುವುದಾಗಿ ತಮ್ಮ ಮೇಲೆ ಬಿಜೆಪಿ ವಕ್ತಾರ ಎನ್.ಆರ್ ರಮೇಶ್ ಮಾಡಿರುವ ಆರೋಪ ಆಧಾರರಹಿತವಾಗಿದ್ದು,  ಅವರ ವಿರುದ್ಧ ಸದನದಲ್ಲಿ ಹಕ್ಕುಚ್ಯುತಿ ಮಂಡಿಸಿ ನ್ಯಾಯಾಲಯದಲ್ಲಿ ಮಾನನಷ್ಟ  ಮತ್ತು ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ವಿಧಾನಸಭೆ ಉಪಸಭಾಧ್ಯಕ್ಷ ಕೃಷ್ಣಾ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಮೇಲೆ ಅನಗತ್ಯ ಆರೋಪ ಮಾಡಿರುವವರಿಗೆ ಬುದ್ದಿ ಭ್ರಮಣೆಯಾಗಿದೆ. ಈ ರೀತಿ ಮಂಗನಾಟ ಆಡುವವರನ್ನು ಬಿಜೆಪಿ ವಕ್ತಾರರನ್ನಾಗಿ ನೇಮಿಸಿಕೊಂಡಿರುವುದು ತಮಗೆ ಅಚ್ಚರಿ ತರಿಸಿದೆ ಎಂದರು. 

ಬೆಂಗಳೂರಿನ ಭವಾನಿ ಹೌಸಿಂಗ್ ಕೋ-ಆಪರೇಟಿವ್ ಸೊಸೈಟಿಯ ಕೆಲವರು ಈ ವರ್ಷದ ಜನವರಿಯಲ್ಲಿ ಅರ್ಜಿಗಳ ಸಮಿತಿಗೆ ಮನವಿ ಸಲ್ಲಿಸಿ ಬನಶಂಕರಿ ೩ನೇ ಹಂತದ ಭವಾನಿ ಲೇಔಟ್‌ನಲ್ಲಿ ಮಹಾನಗರ ಪಾಲಿಕೆ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಸ.ನಂ. ೧೨೫ ಮತ್ತು ೧೨೬ ರಲ್ಲಿ ಉದ್ಯಾನವನ ಮತ್ತು ಮೈದಾನ ಅಭಿವೃದ್ಧಿ ಮಾಡುತ್ತಿದೆ ಎಂದು ದೂರು ನೀಡಿದ್ದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT