ಬಿಜೆಪಿ ಬಂಡಾಯ ಅಭ್ಯರ್ಥಿ ಕವಿರಾಜ್ ಅರಸು 
ರಾಜಕೀಯ

ಕರ್ನಾಟಕ ಉಪಚುನಾವಣೆ: ಮನವೊಲಿಕೆಗೆ ಜಗ್ಗದ ಕವಿರಾಜ್ ಅರಸು ಈಗ ಬಂಡಾಯ ಅಭ್ಯರ್ಥಿ!  

ಕಾಂಗ್ರೆಸ್-ಜೆಡಿಎಸ್ ತೊರೆದು 15 ಅನರ್ಹ ಶಾಸಕರು ಬಿಜೆಪಿ ಸೇರಿ ಉಪಚುನಾವಣೆಗೆ ಸ್ಪರ್ಧಿಸುತ್ತಿದ್ದು, ಪಕ್ಷದಲ್ಲಿ ಮೂಲ ಬಿಜೆಪಿ ಸದಸ್ಯರ ಬಂಡಾಯ ತೀವ್ರಗೊಳ್ಳುತ್ತಿದೆ. ಈ ಪಟ್ಟಿಯಲ್ಲಿ ಹೊಸಪೇಟೆಯ ವಿಜಯನಗರ ವಿಧಾನಸಭಾ ಕ್ಷೇತ್ರವೂ ಸೇರ್ಪಡೆಯಾಗಿದೆ. 

ಹೊಸಪೇಟೆ: ಕಾಂಗ್ರೆಸ್-ಜೆಡಿಎಸ್ ತೊರೆದು 15 ಅನರ್ಹ ಶಾಸಕರು ಬಿಜೆಪಿ ಸೇರಿ ಉಪಚುನಾವಣೆಗೆ ಸ್ಪರ್ಧಿಸುತ್ತಿದ್ದು, ಪಕ್ಷದಲ್ಲಿ ಮೂಲ ಬಿಜೆಪಿ ಸದಸ್ಯರ ಬಂಡಾಯ ತೀವ್ರಗೊಳ್ಳುತ್ತಿದೆ. ಈ ಪಟ್ಟಿಯಲ್ಲಿ ಹೊಸಪೇಟೆಯ ವಿಜಯನಗರ ವಿಧಾನಸಭಾ ಕ್ಷೇತ್ರವೂ ಸೇರ್ಪಡೆಯಾಗಿದೆ. 

ವಿಜಯನಗರ ಶಾಸಕರಾಗಿದ್ದ ಆನಂದ್ ಸಿಂಗ್ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು. ಈಗ ಅದೇ ಕ್ಷೇತ್ರದಿಂದ ಬಿಜೆಪಿಯಿಂದ ಕವಿರಾಜ್ ಅರಸು ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಬಿಜೆಪಿ ಆನಂದ್ ಸಿಂಗ್ ನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಿದೆ. ಬಿಜೆಪಿಯ ಈ ನಿರ್ಧಾರವನ್ನು ವಿರೋಧಿಸಿ, ಕವಿರಾಜ್ ಅರಸು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನ.16 ರಂದು ಸಂಸದ ದೇವೇಂದ್ರಪ್ಪ ಕರಡಿ ಮಗಣ್ಣ ಅವರಿಂದ ಸಂಧಾನಕ್ಕೆ ಪ್ರಯತ್ನ ಮಾಡಲಾಯಿತು. 

ಬೆಳಗಿನಿಂದ ನಗರದ ಅತೃಪ್ತರ ಮನೆಗೆ ಭೇಟಿ ನೀಡಿರುವ ಸಂಧಾನ ತಂಡ. ಕವಿರಾಜ್ ಅವರ ಮನವೊಲಿಕೆಗೆ ಪ್ರಯತ್ನಿಸಿತ್ತಾದರೂ, ಯಾವುದಕ್ಕೂ ಜಗ್ಗದ  ಕವಿರಾಜ್ ಅರಸು ಆನಂದ್ ಸಿಂಗ್ ಮುಂದೆಯೇ ತಮ್ಮ ಆಕ್ರೋಶ ಹೊರಹಾಕಿದರು ನನ್ನನ್ನ ಸೋಲಿಸಲು ಪ್ರಯತ್ನಮಾಡಿದ್ದ ಸಿಂಗ್ ಗೆ ನನ್ನ ಬೆಂಬಲ ಇಲ್ಲ ಎಂದು ಖಡಕ್ ಆಗಿ ಉತ್ತರ ಕೊಟ್ಟರು.

ಕೊನೆಗೆ ಬಂಡಾಯ ಶಮನಕ್ಕೆ ಮುಂದಾದ ಆನಂದ್ ಸಿಂಗ್ ಕಾಲಿಗೆ ಎರಗಿ ನನಗೇ ಅವಕಾಶ ಕೊಡಿ ನನಗೇ ಈ ಬಾರಿ ಅವಕಾಶ ಕೊಟ್ಟು ಪುಣ್ಯಕಟ್ಟಿಕೊಳ್ಳಿ ಎಂದು ಕಾಲಿಗೆ ನಮಸ್ಕರಿಸಲು ಕವಿರಾಜ್ ಮುಂದಾದರು. ಕವಿರಾಜ್ ಯಾವುದಕ್ಕೂ ಜಗ್ಗದ ಕಾರಣ ಮನವೊಲಿಕೆಗೆ ಬಂದವರು ಸುಸ್ತಾದರು.

ವರದಿ: ಸುಬಾನಿ ಪಿಂಜಾರ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT