ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 
ರಾಜಕೀಯ

ಆರ್ ಶಂಕರ್ ರನ್ನು ಪರಿಷತ್ ಗೆ ಆಯ್ಕೆ ಮಾಡಿ ಸಚಿವ ಸ್ಥಾನ ನೀಡುತ್ತೇವೆ: ಸಿಎಂ ಯಡಿಯೂರಪ್ಪ

ಅನರ್ಹಗೊಂಡು ಹೊಸದಾಗಿ ಬಿಜೆಪಿಗೆ ಸೇರಿರುವ ಶಾಸಕರಲ್ಲಿ ಒಬ್ಬರಾದ ಆರ್ ಶಂಕರ್ ಅವರು ರಾಣೆಬೆನ್ನೂರು ಬಿಜೆಪಿ ಅಭ್ಯರ್ಥಿ ಅರುಣ್ ಕುಮಾರ್ ಗುತ್ತಲ್ ಅವರ ವಿಜಯಕ್ಕಾಗಿ ಕೆಲಸ ಮಾಡುತ್ತಾರೆ...

ಬೆಂಗಳೂರು: ಅನರ್ಹಗೊಂಡು ಹೊಸದಾಗಿ ಬಿಜೆಪಿಗೆ ಸೇರಿರುವ ಶಾಸಕರಲ್ಲಿ ಒಬ್ಬರಾದ ಆರ್ ಶಂಕರ್ ಅವರು ರಾಣೆಬೆನ್ನೂರು ಬಿಜೆಪಿ ಅಭ್ಯರ್ಥಿ ಅರುಣ್ ಕುಮಾರ್ ಗುತ್ತಲ್ ಅವರ ವಿಜಯಕ್ಕಾಗಿ ಕೆಲಸ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಶನಿವಾರ ಹೇಳಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರ ಜೊತೆ ಮಾತಾನಾಡಿದ ಸಿಎಂ, 2018ರ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿದ್ದ ಶಂಕರ್ ಅವರೊಂದಿಗೆ ಮಾತನಾಡಿದ್ದು, ಬಿಜೆಪಿ ಅಭ್ಯರ್ಥಿಯ ವಿಜಯಕ್ಕಾಗಿ ಮನಸಾರೆ ಕೆಲಸ ಮಾಡುವುದಾಗಿ ಭರವಸೆ ನೀಡಿದ್ದಾರೆ. ಇದಕ್ಕೆ ಪ್ರತಿಯಾಗಿ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿ, ನಂತರ ಸಚಿವರನ್ನಾಗಿ ನೇಮಕ ಮಾಡುವುದಾಗಿ ಹೇಳಿದ್ದು, ಅದಕ್ಕೆ ಅವರು ಸಮ್ಮತಿ ಸೂಚಿಸಿದ್ದಾರೆ ಎಂದರು.

ಬಿಜೆಪಿ ಅರುಣ್ ಕುಮಾರ್ ಗುತ್ತಲ್ ಅವರನ್ನು ರಾಣೆಬೆನ್ನೂರ್ ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ ಮತ್ತು ಶಂಕರ್ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಕಾಯ, ವಾಚ, ಮನಸ ಕೆಲಸ ಮಾಡುತ್ತಾರೆ ಎಂಬ ನಂಬಿಕೆಯಿದೆ ಎಂದು ಯಡಿಯೂರಪ್ಪ ಹೇಳಿದರು.

ರಾಣೆಬೆನ್ನೂರು ಕ್ಷೇತ್ರದ ಟಿಕೆಟ್ ಬೇರೆಯವರ ಪಾಲಾಗುತ್ತಿದ್ದಂತೆ ಶಂಕರ್ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡ ಸಿಎಂ ಯಡಿಯೂರಪ್ಪ, ಅವರ ಜೊತೆ ಮಾತುಕತೆ ನಡೆಸಿ, ಸಚಿವ ಸ್ಥಾನ ನೀಡುವ ಭರವಸೆ ನೀಡಿದರು. ಅಲ್ಲದೆ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಮನವೊಲಿಸುವಲ್ಲಿ ಯಶಸ್ವಿಯಾದರು.

ಸಿಎಂ ಭೇಟಿ ಬಳಿಕ ಮಾತನಾಡಿದ ಶಂಕರ್, ಯಡಿಯೂರಪ್ಪ ಅವರು ನನಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದಾರೆ. ರಾಣೆಬೆನ್ನೂರು ಕ್ಷೇತ್ರದಲ್ಲಿ ಬಿಜೆಪಿಯಿಂದ ಯಾರೇ ಸ್ಪರ್ಧಿಸಿದರೂ ಅವರ ಗೆಲುವಿಗೆ ಶ್ರಮಿಸುತ್ತೇನೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!