ಪ್ರತಾಪ್ ಗೌಡ ಪಾಟೀಲ್ 
ರಾಜಕೀಯ

ಷರತ್ತಿಲ್ಲದೆ ಬಿಜೆಪಿ ಸೇರಿದ್ದೇನೆ- ಪ್ರತಾಪ್ ಗೌಡ ಪಾಟೀಲ್ 

ಶೀಘ್ರವೇ ಮಸ್ಕಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ೫೫೦ ಕೋಟಿ ರೂಪಾಯಿ ಮಂಜೂರಾಗಲಿದೆ ಎಂದು ಮಸ್ಕಿ ಕ್ಷೇತ್ರದ ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್ ಹೇಳಿದ್ದಾರೆ.

ರಾಯಚೂರು: ಶೀಘ್ರವೇ ಮಸ್ಕಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ೫೫೦ ಕೋಟಿ ರೂಪಾಯಿ ಮಂಜೂರಾಗಲಿದೆ ಎಂದು ಮಸ್ಕಿ ಕ್ಷೇತ್ರದ ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್ ಹೇಳಿದ್ದಾರೆ.

ಭಾರತೀಯ ಜನತಾ ಪಕ್ಷ ಸೇರಿದ ನಂತರ ಇದೇ ಪ್ರಥಮ ಬಾರಿಗೆ ಜಿಲ್ಲಾ ಬಿಜೆಪಿ ಕಚೇರಿಗೆ ಆಗಮಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರಿಲ್ಲದೆ ಕ್ಷೇತ್ರ ಅನಾಥವಾಗಿಲ್ಲ. ಸಂಸದ ಸಂಗಣ್ಣ ಕರಡಿ ಕ್ಷೇತ್ರದ ಅಭಿವೃದ್ಧಿ ಕುರಿತು ಪರಿಶೀಲನೆ ಮಾಡುತ್ತಿದ್ದಾರೆ. ಬಿಜೆಪಿ ಸರಕಾರ ಅಧಿಕಾರಕ್ಕೆ ೧೦೦ ದಿನಗಳಲ್ಲಿ ೧೦೦ ಕೋ.ರೂ ಅನುದಾನ ಮಂಜೂರಾಗಿದೆ ಎಂದು ಹೇಳಿದರು.

ಮಸ್ಕಿ ಕ್ಷೇತ್ರದ ೧೩ ಕೆರೆಗಳ ಭರ್ತಿಗೆ ಹಾಗೂ ಮಸ್ಕಿ ನಾಲಾ ಮತ್ತು ಕನಕ ನಾಲಾ ಯೋಜನೆಗಳಿಗೆ ಬರುವ ಕೆಲವೇ ದಿನಗಳಲ್ಲಿ ೫೦೨ ಕೋ.ರೂ ಅನುದಾನ ಮಂಜೂರಾಗಲಿದೆ. ಈ ಮೂಲಕ ಕ್ಷೇತ್ರದ ಬಹುದಿನಗಳ ಬೇಡಿಕೆ ಈಡೇರಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಒಪ್ಪಿದ್ದಾರೆ ಎಂದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT