ರೋಷನ್ ಬೇಗ್ 
ರಾಜಕೀಯ

ಕೈಕೊಟ್ಟ ಜೆಡಿಎಸ್-ಬಿಜೆಪಿ: ಉಪಚುನಾವಣಾ ಕಣದಿಂದ ರೋಷನ್ ಬೇಗ್ ಔಟ್!

ಟಿಕೆಟ್ ನೀಡದೆ ಕೈಕೊಟ್ಟ ಬಿಜೆಪಿ ನಿಲುವಿನಿಂದ ಬೇಸತ್ತು ಶಿವಾಜಿನಗರ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧೆ ಮಾಡುವುದಾಗಿ ಹೇಳಿದ್ದ ಅನರ್ಹ ಶಾಸಕ ರೋಷನ್ ಬೇಗ್ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ.

ಬೆಂಗಳೂರು: ಟಿಕೆಟ್ ನೀಡದೆ ಕೈಕೊಟ್ಟ ಬಿಜೆಪಿ ನಿಲುವಿನಿಂದ ಬೇಸತ್ತು ಶಿವಾಜಿನಗರ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧೆ ಮಾಡುವುದಾಗಿ ಹೇಳಿದ್ದ ಅನರ್ಹ ಶಾಸಕ ರೋಷನ್ ಬೇಗ್ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ.

ಬಿಜೆಪಿ ಪಕ್ಷದಿಂದ ಟಿಕೆಟ್​ ಕೈತಪ್ಪಿದ್ದರಿಂದ ಬೇಗ್​ಅವರು ಅತಂತ್ರರಾಗಿದ್ದರು. ಐಎಂಎ ಹಗರಣದಲ್ಲಿ ಬೇಗ್​ ಹೆಸರು ತಳುಕುಹಾಕಿಕೊಂಡಿದ್ದರಿಂದ ಬಿಜೆಪಿ ಟಿಕೆಟ್​ನೀಡಿಲ್ಲ ಎನ್ನಲಾಗುತ್ತಿದೆ ಸಾಮಾಜಿಕ ಜಾಲತಾಣದಲ್ಲಿ ಶಿವಾಜಿನಗರ ಜನತೆಗೆ ಕೃತಜ್ಞತೆ ಸಲ್ಲಿಸಿರುವ ರೋಷನ್​​​​ ಬೇಗ್​ಐಎಂಎ ಪ್ರಕರಣದಿಂದ ಚುನಾವಣೆಯಲ್ಲಿ ಹಿನ್ನಡೆ ಆಗುವ ಆತಂಕದ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸದಿರಲು ನಿರ್ಧರಿಸಿದ್ದು,ಚುನಾವಣೆಯಲ್ಲಿ ತಟಸ್ಥರಾಗಿ ಉಳಿಯುವ ತೀರ್ಮಾನವನ್ನು ಕೈಕೊಂಡಿದ್ದಾರೆ.

ನಿನ್ನೆ ಅನರ್ಹ ಶಾಸಕ ರೋಷನ್​ ಬೇಗ್​ ಬೆಂಬಲಿಗರ ಸಭೆ ನಡೆಸಿ ಚುನಾವಣಾ ಕಣದಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.ಕಾಂಗ್ರೆಸ್​ನಿಂದ ದೂರವಾಗಿ, ಬಿಜೆಪಿಗೆ ಬೇಡವಾಗಿ ಅತಂತ್ರ ಸ್ಥಿತಿಯಲ್ಲಿದ್ದ ರೋಷನ್ ಬೇಗ್​​ ಭಾನುವಾರ ಹಾಸನಕ್ಕೆ ತೆರಳಿ ಜೆಡಿಎಸ್ ನಾಯಕರ ಜತೆಗೆ ರಹಸ್ಯ ಮಾತುಕತೆ ನಡೆಸಿದ್ದರು.ಆದರೆ ಜೆಡಿಎಸ್ ಟಿಕೆಟ್ ಸಿಗದಿದ್ದ ಹಿನ್ನಲೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದರು ಎನ್ನಲಾಗಿದೆ.

ಆದರೆ ಅಂತಿಮ ಕ್ಷಣದಲ್ಲಿ ಕಣದಿಂದ ಹಿಂದೆ ಸರಿಯುವ ಮೂಲಕ ಬಿಜೆಪಿ ಅಭ್ಯರ್ಥಿಗೆ ಗೆಲುವಿಗೆ ಬೆಂಬಲಿಸುವಂತೆ ಬಿಜೆಪಿ ವರಿಷ್ಠರು ಮನವೊಲಿಸಿದ್ದಾರೆ ಎನ್ನಲಾಗಿದೆ.

ಐಎಂಎ ಪ್ರಕರಣ,ರುದ್ರೇಶ್ ಹತ್ಯೆ ಪ್ರಕರಣಗಳು ಅವರಿಗೆ ಉರುಳಾಗಿರುವ ಹಿನ್ನೆಲೆ ರೋಷನ್ ಬೇಗ್ ಪ್ರಕರಣಗಳಿಂದ ಹೊರ ಬರಬರುವ ತನಕ ಯಾವುದೇ ರಾಜಕೀಯ ಪಕ್ಷಗಳು ಅವರನ್ನು ಹತ್ತಿರ ಸೇರಿಸಕೊಳ್ಳಲು ಹಿಂದೇಟು ಹಾಕಿವೆ.ರಾಜಕೀಯ ಭವಿಷ್ಯ ಹಾಗೂ ಕ್ಷೇತ್ರವನ್ನು ಕಳೆದುಕೊಳ್ಳುವ ಭೀತಿ ಹಿನ್ನಲೆಯಲ್ಲಿ ಪಕ್ಷೇತರನಾಗಿ ಕಣಕ್ಕಿಳಿಯುವಂತೆ ಬೆಂಬಲಿಗರು ಒತ್ತಾಯಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT