ಸತೀಶ್ ಜಾರಕಿಹೊಳಿ 
ರಾಜಕೀಯ

ಉಪ ಚುನಾವಣೆ: ಜಾರಕಿಹೊಳಿ,ಬಚ್ಚೇಗೌಡ ನಾಮಪತ್ರ ತಿರಸ್ಕೃತ

ಗೋಕಾಕ್ ಮತ್ತು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿಗಳಾಗಿದ್ದ ಮಾಜಿ ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ  ಕೆ. ಪಿ. ಬಚ್ಚೇಗೌಡ ಅವರ ನಾಮಪತ್ರಗಳು ತಿರಸ್ಕೃತಗೊಂಡಿವೆ.

ಬೆಂಗಳೂರು: ಗೋಕಾಕ್ ಮತ್ತು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿಗಳಾಗಿದ್ದ ಮಾಜಿ ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ  ಕೆ. ಪಿ. ಬಚ್ಚೇಗೌಡ ಅವರ ನಾಮಪತ್ರಗಳು ತಿರಸ್ಕೃತಗೊಂಡಿವೆ.

ಇಬ್ಬರೂ ಅಭ್ಯರ್ಥಿಗಳು ತಮ್ಮ ನಾಮಪತ್ರದೊಂದಿಗೆ ಫಾರ್ಮ್ ಬಿ ಸಲ್ಲಿಸದ ಕಾರಣದಿಂದಾಗಿ ನಾಮಪತ್ರಗಳು ತಿರಸ್ಕೃತಗೊಂಡಿವೆ ಎಂಬುದಾಗಿ ಚುನಾವಣಾ ಆಯೋಗದ ಕಚೇರಿ ತಿಳಿಸಿದೆ.

ಸೋಮವಾರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಲಖನ್ ಜಾರಕಿಹೊಳಿಯೊಂದಿಗೆ  ಅವರ ಸಹೋದರ ಸತೀಶ್ ಜಾರಕಿಹೊಳಿ ಕೂಡಾ ನಾಮಪತ್ರ ಸಲ್ಲಿಸಿದ್ದರು. ಆದರೆ, ಗೋಕಾಕ್ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ  ಅಧಿಕೃತ ಅಭ್ಯರ್ಥಿಯಾಗಿರುವ ಲಖನ್ ಜಾರಕಿಹೊಳಿ ಅವರ ನಾಮಪತ್ರ  ಸಿಂಧುವಾಗಿದೆ. ಪರಿಣಾಮ ಎರಡನೇ ಅಭ್ಯರ್ಥಿಯಾಗಿದ್ದ ಸತೀಶ್ ಜಾರಕಿಹೊಳಿ ಉಮೇದುವಾರಿಕೆ ತಿರಸ್ಕೃತಗೊಂಡಿದೆ.

ಮತ್ತೊಂದೆಡೆ  ಚಿಕ್ಕಬಳ್ಳಾಪುರ ಕ್ಷೇತ್ರದ ಜೆಡಿಎಸ್ ಪಕ್ಷದ ಆದ್ಯತೆಯ ಅಭ್ಯರ್ಥಿಯಾಗಿದ್ದ ರಾಧಾಕೃಷ್ಣ ಅವರ ನಾಮಪತ್ರ ಸಿಂಧುವಾಗಿದ್ದು, ಎರಡನೇ ಅಭ್ಯರ್ಥಿಯಾಗಿದ್ದ ಕೆ. ಪಿ. ಬಚ್ಚೇಗೌಡ ಅವರ ನಾಮಪತ್ರ ಅಸಿಂಧು ಎಂದು ಚುನಾವಣಾ ಆಯೋಗ ಘೋಷಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

SCROLL FOR NEXT