ಸತೀಶ್ ಜಾರಕಿಹೊಳಿ 
ರಾಜಕೀಯ

ಉಪ ಚುನಾವಣೆ: ಜಾರಕಿಹೊಳಿ,ಬಚ್ಚೇಗೌಡ ನಾಮಪತ್ರ ತಿರಸ್ಕೃತ

ಗೋಕಾಕ್ ಮತ್ತು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿಗಳಾಗಿದ್ದ ಮಾಜಿ ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ  ಕೆ. ಪಿ. ಬಚ್ಚೇಗೌಡ ಅವರ ನಾಮಪತ್ರಗಳು ತಿರಸ್ಕೃತಗೊಂಡಿವೆ.

ಬೆಂಗಳೂರು: ಗೋಕಾಕ್ ಮತ್ತು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿಗಳಾಗಿದ್ದ ಮಾಜಿ ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ  ಕೆ. ಪಿ. ಬಚ್ಚೇಗೌಡ ಅವರ ನಾಮಪತ್ರಗಳು ತಿರಸ್ಕೃತಗೊಂಡಿವೆ.

ಇಬ್ಬರೂ ಅಭ್ಯರ್ಥಿಗಳು ತಮ್ಮ ನಾಮಪತ್ರದೊಂದಿಗೆ ಫಾರ್ಮ್ ಬಿ ಸಲ್ಲಿಸದ ಕಾರಣದಿಂದಾಗಿ ನಾಮಪತ್ರಗಳು ತಿರಸ್ಕೃತಗೊಂಡಿವೆ ಎಂಬುದಾಗಿ ಚುನಾವಣಾ ಆಯೋಗದ ಕಚೇರಿ ತಿಳಿಸಿದೆ.

ಸೋಮವಾರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಲಖನ್ ಜಾರಕಿಹೊಳಿಯೊಂದಿಗೆ  ಅವರ ಸಹೋದರ ಸತೀಶ್ ಜಾರಕಿಹೊಳಿ ಕೂಡಾ ನಾಮಪತ್ರ ಸಲ್ಲಿಸಿದ್ದರು. ಆದರೆ, ಗೋಕಾಕ್ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ  ಅಧಿಕೃತ ಅಭ್ಯರ್ಥಿಯಾಗಿರುವ ಲಖನ್ ಜಾರಕಿಹೊಳಿ ಅವರ ನಾಮಪತ್ರ  ಸಿಂಧುವಾಗಿದೆ. ಪರಿಣಾಮ ಎರಡನೇ ಅಭ್ಯರ್ಥಿಯಾಗಿದ್ದ ಸತೀಶ್ ಜಾರಕಿಹೊಳಿ ಉಮೇದುವಾರಿಕೆ ತಿರಸ್ಕೃತಗೊಂಡಿದೆ.

ಮತ್ತೊಂದೆಡೆ  ಚಿಕ್ಕಬಳ್ಳಾಪುರ ಕ್ಷೇತ್ರದ ಜೆಡಿಎಸ್ ಪಕ್ಷದ ಆದ್ಯತೆಯ ಅಭ್ಯರ್ಥಿಯಾಗಿದ್ದ ರಾಧಾಕೃಷ್ಣ ಅವರ ನಾಮಪತ್ರ ಸಿಂಧುವಾಗಿದ್ದು, ಎರಡನೇ ಅಭ್ಯರ್ಥಿಯಾಗಿದ್ದ ಕೆ. ಪಿ. ಬಚ್ಚೇಗೌಡ ಅವರ ನಾಮಪತ್ರ ಅಸಿಂಧು ಎಂದು ಚುನಾವಣಾ ಆಯೋಗ ಘೋಷಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

SCROLL FOR NEXT