ಸತೀಶ್ ಜಾರಕಿಹೊಳಿ 
ರಾಜಕೀಯ

ಉಪ ಚುನಾವಣೆ: ಜಾರಕಿಹೊಳಿ,ಬಚ್ಚೇಗೌಡ ನಾಮಪತ್ರ ತಿರಸ್ಕೃತ

ಗೋಕಾಕ್ ಮತ್ತು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿಗಳಾಗಿದ್ದ ಮಾಜಿ ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ  ಕೆ. ಪಿ. ಬಚ್ಚೇಗೌಡ ಅವರ ನಾಮಪತ್ರಗಳು ತಿರಸ್ಕೃತಗೊಂಡಿವೆ.

ಬೆಂಗಳೂರು: ಗೋಕಾಕ್ ಮತ್ತು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿಗಳಾಗಿದ್ದ ಮಾಜಿ ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ  ಕೆ. ಪಿ. ಬಚ್ಚೇಗೌಡ ಅವರ ನಾಮಪತ್ರಗಳು ತಿರಸ್ಕೃತಗೊಂಡಿವೆ.

ಇಬ್ಬರೂ ಅಭ್ಯರ್ಥಿಗಳು ತಮ್ಮ ನಾಮಪತ್ರದೊಂದಿಗೆ ಫಾರ್ಮ್ ಬಿ ಸಲ್ಲಿಸದ ಕಾರಣದಿಂದಾಗಿ ನಾಮಪತ್ರಗಳು ತಿರಸ್ಕೃತಗೊಂಡಿವೆ ಎಂಬುದಾಗಿ ಚುನಾವಣಾ ಆಯೋಗದ ಕಚೇರಿ ತಿಳಿಸಿದೆ.

ಸೋಮವಾರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಲಖನ್ ಜಾರಕಿಹೊಳಿಯೊಂದಿಗೆ  ಅವರ ಸಹೋದರ ಸತೀಶ್ ಜಾರಕಿಹೊಳಿ ಕೂಡಾ ನಾಮಪತ್ರ ಸಲ್ಲಿಸಿದ್ದರು. ಆದರೆ, ಗೋಕಾಕ್ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ  ಅಧಿಕೃತ ಅಭ್ಯರ್ಥಿಯಾಗಿರುವ ಲಖನ್ ಜಾರಕಿಹೊಳಿ ಅವರ ನಾಮಪತ್ರ  ಸಿಂಧುವಾಗಿದೆ. ಪರಿಣಾಮ ಎರಡನೇ ಅಭ್ಯರ್ಥಿಯಾಗಿದ್ದ ಸತೀಶ್ ಜಾರಕಿಹೊಳಿ ಉಮೇದುವಾರಿಕೆ ತಿರಸ್ಕೃತಗೊಂಡಿದೆ.

ಮತ್ತೊಂದೆಡೆ  ಚಿಕ್ಕಬಳ್ಳಾಪುರ ಕ್ಷೇತ್ರದ ಜೆಡಿಎಸ್ ಪಕ್ಷದ ಆದ್ಯತೆಯ ಅಭ್ಯರ್ಥಿಯಾಗಿದ್ದ ರಾಧಾಕೃಷ್ಣ ಅವರ ನಾಮಪತ್ರ ಸಿಂಧುವಾಗಿದ್ದು, ಎರಡನೇ ಅಭ್ಯರ್ಥಿಯಾಗಿದ್ದ ಕೆ. ಪಿ. ಬಚ್ಚೇಗೌಡ ಅವರ ನಾಮಪತ್ರ ಅಸಿಂಧು ಎಂದು ಚುನಾವಣಾ ಆಯೋಗ ಘೋಷಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

1st ODI: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್, ಸಚಿನ್ ತೆಂಡೂಲ್ಕರ್, ಸಂಗಕ್ಕಾರ ದಾಖಲೆ ಮುರಿದ Virat Kohli

SCROLL FOR NEXT