ರಾಜಕೀಯ

ಭವಿಷ್ಯದಲ್ಲಿ ನಾನು ಮುಖ್ಯಮಂತ್ರಿ: ಸಚಿವ ಶ್ರೀರಾಮುಲು

Vishwanath S

ಹುಣಸೂರು: ಉಪಚುನಾವಣೆ ಬಳಿಕ ಬಿಎಸ್ ಯಡಿಯೂರಪ್ಪನವರ ಸರ್ಕಾರ ಇರುವುದಿಲ್ಲ ಎಂದು ವಿಪಕ್ಷದ ನಾಯಕರು ಭವಿಷ್ಯ ನುಡಿಯುತ್ತಿದ್ದು ಇದರ ಮಧ್ಯೆ ಸಚಿವ ಶ್ರೀರಾಮುಲು ಭವಿಷ್ಯದಲ್ಲಿ ನಾನು ಮುಖ್ಯಮಂತ್ರಿ ಆಗುತ್ತೇನೆ ಎಂದು ಹೇಳಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.

ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡಿದ ಶ್ರೀರಾಮುಲು ಅವರು ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಲು ಗೆದ್ದ 24 ಗಂಟೆಯೊಳಗೆ ಅವರಿಗೆ ಸಚಿವ ಸ್ಥಾನ ನೀಡುವುದು ಖಚಿತ ಎಂದು ಹೇಳಿದರು. 

ಇನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು 15 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದರೆ ಮತ್ತೆ ಮುಖ್ಯಮಂತ್ರಿಯಾಗಬಹುದು ಎಂದು ಹಗಲುಗನಸು ಕಾಣುತ್ತಿದ್ದಾರೆ. ಕಾಂಗ್ರೆಸ್ ದೂಳೀಪಟವಾಗಿ ಬಿಜೆಪಿ ಮೈಲುಗೈ ಸಾಧಿಸುವುದು ನಿಶ್ಚಿತ ಎಂದರು. 

ನನಗೆ ಇನ್ನು ವಯಸ್ಸಿದೆ. ಭವಿಷ್ಯದಲ್ಲಿ ನಾನು ಮುಖ್ಯಮಂತ್ರಿಯಾಗುವೆ. ಸದ್ಯಕ್ಕೆ ಬಿಎಸ್ ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ಅನುಭವ ಪಡೆಯುವೆ ಎಂದು ಹೇಳಿದರು.

SCROLL FOR NEXT