ರಾಜಕೀಯ

ಚುನಾವಣಾ ಕಣದಿಂದ ಹಿಂದೆ ಸರಿದ ಜೆಡಿಎಸ್ ಅಭ್ಯರ್ಥಿ ಶಿವಲಿಂಗ ಶಿವಾಚಾರ್ಯ ಶ್ರೀಗಳು

Manjula VN

ಹಿರೆಕೆರೂರು: ಹಿರೇಕೆರೂರು ಕ್ಷೇತ್ರದಿಂದ ಜೆಡಿಎಸ್​ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಕಬ್ಬಿಣಕಂಥಿ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಚುನಾವಣಾ ಕಣದಿಂದ ಹಿಂದೆ ಸರಿಯಲು ನಿರ್ಧಾರ ಮಾಡಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ.

ನಾಳೆ ನಾಮಪತ್ರ ಹಿಂಪಡೆಯುತ್ತೇನೆ. ಹಲವು ಮಠಾಧೀಶರ ಸಲಹೆ ಹಿನ್ನೆಲೆ ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಸ್ವಾಮೀಜಿ ಹೇಳಿದ್ದಾರೆ ಎನ್ನಲಾಗಿದೆ.

ಕ್ಷೇತ್ರದಲ್ಲಿ ಲಿಂಗಾಯತ ಮತ ವಿಭಜನೆ ಆರೋಪ ಹಿನ್ನೆಲೆಯಲ್ಲಿ ಸ್ವಾಮೀಜಿ ಅವರು ಸ್ಪರ್ಧೆಯಿಂದ ಹಿಂದೆ ಸರಿಯಲು ಕುಮಾರಸ್ವಾಮಿ ಮನವಿ ಮಾಡಿ ದ್ದರು. ಪಟ್ಟುಬಿಡದೆ ಅಜ್ಞಾತ ಸ್ಥಳದಲ್ಲಿ ಇರುವ ಸ್ವಾಮೀಜಿಗಳು, ಯಾವುದೇ ಕಾರಣಕ್ಕೂ ಹಿಂದೆ ಸರಿಯಲ್ಲ ಎಂದು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

SCROLL FOR NEXT