ಕುಮಾರಸ್ವಾಮಿ 
ರಾಜಕೀಯ

ರಾಜಕಾರಣದಲ್ಲಿ ನೈತಿಕತೆ ಉಳಿದುಕೊಂಡಿಲ್ಲ: ಎನ್ ಸಿಪಿ-ಬಿಜೆಪಿ ಸರ್ಕಾರ ರಚನೆಗೆ ಎಚ್ ಡಿಕೆ ಕಿಡಿ

ರಾಜಕಾರಣದಲ್ಲಿ ಇವತ್ತು ನೈತಿಕತೆ ಉಳಿದುಕೊಂಡಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಹತಾಶೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ರಾಜಕಾರಣದಲ್ಲಿ ಇವತ್ತು ನೈತಿಕತೆ ಉಳಿದುಕೊಂಡಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಹತಾಶೆ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಬಿಜೆಪಿ-ಎನ್​ಸಿಪಿ ಸರ್ಕಾರ ರಚನೆ ವಿಚಾರವಾಗಿ ಮಾತನಾಡಿದ ಅವರು ಎನ್​ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ಬಿಜೆಪಿಯ ವಿರುದ್ಧವೇ ಹೋರಾಟ ಮಾಡಿಕೊಂಡು ಬಂದವರು. ಈಗ ಬಿಜೆಪಿ ಜೊತೆ ಕೈಜೋಡಿಸಿದ್ದಾರೆ. ಇಂದು ಸಿದ್ದಾಂತಗಳಿಗೆ ಬೆಲೆ ಇಲ್ಲದಂತಾಗಿದೆ ಎಂದರು.

ಬಿಹಾರದಲ್ಲಿ ನಿತೀಶ್ ಕುಮಾರ್, ಲಾಲು ಪ್ರಸಾದ್​ ಯಾದವ್ ಜೊತೆ ಸೇರಿಕೊಂಡಿದ್ದರು, ಆನಂತರ ಬಿಜೆಪಿ ಜೊತೆ ಸೇರಿ ಸರ್ಕಾರ ಮಾಡಿದರು. ಬಿಜೆಪಿಯವರು ಎನ್​ಸಿಪಿಯ ಭ್ರಷ್ಟಾಚಾರ ಬಯಲು ಮಾಡುತ್ತೇನೆ ಎಂದು ಹೇಳುತ್ತಿದ್ದರು. 

ಆದರೆ ಇವತ್ತು ಎನ್​ಸಿಪಿ ಜೊತೆ ಬಿಜೆಪಿ ಸರ್ಕಾರ ರಚನೆ ಮಾಡಿದ್ದಾರೆ. ನಮಗೆ ಸಿದ್ಧಾಂತ ಇಲ್ಲ ಎಂದು ಬಿಜೆಪಿಯವರು ಟೀಕೆ ಮಾಡ್ತಾರೆ. ಬಿಜೆಪಿಯವರು ಮಹಾರಾಷ್ಟ್ರದಲ್ಲಿ ಮಾಡಿದ್ದಾದ್ರೂ ಏನು? ಎಂದು ಮಾಜಿ ಸಿಎಂ ಪ್ರಶ್ನಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜನರ ಭಾವನೆ ಮೇಲೆ ರಾಜಕಾರಣ ಮಾಡಲ್ಲ: ಸುಮ್ಮನೆ ಘೋಷಣೆ ಮಾಡಿ ಮರೆಯುವ ಜಾಯಮಾನ ನಮ್ಮದಲ್ಲ- ಸಿಎಂ ಡಿಕೆ ಶಿವಕುಮಾರ್!

ಟಿ. ನರಸೀಪುರ ಶೋಭಾಯಾತ್ರೆ: ಮಸೀದಿ ಮುಂದೆ ಪಟಾಕಿ ಸಿಡಿಸಿ ಸಂಭ್ರಮ, ಒಂದುವರೆ ವರ್ಷದಲ್ಲಿ ನಾವು ಬರ್ತೀವಿ, ಅವಾಗ ಲೆಕ್ಕ ಚುಪ್ತ ಮಾಡ್ತೀವಿ- ಪ್ರತಾಪ್ ಸಿಂಹ

ಪಂಚಾಯ್ತಿ ಚುನಾವಣೆ ನಡೆಸಲು ಸಚಿವ ಸಂಪುಟದ ನಿರ್ಧಾರ: EVM ಬದಲು ಮತಪೆಟ್ಟಿಗೆ ಬಳಕೆ

ದೀದಿ ಜೊತೆಗೆ ಕಾಂಗ್ರೆಸ್ ಗೂ ಶಾಕ್; TMC ಬೆಂಬಲ ಬೆನ್ನಲ್ಲೇ ನಂದಿಗ್ರಾಮ 'ಕೈ' ಅಭ್ಯರ್ಥಿ ಕೊಲೆ ಕೇಸ್`ನಲ್ಲಿ ಅರೆಸ್ಟ್!

ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ, ಷರತ್ತು ಅನ್ವಯ!