ರಾಜಕೀಯ

'ಹೆಣ್ಣಾಗಿ ನಾನು 1200 ಕೋಟಿ ಅನುದಾನ ತಂದಿದ್ದೇನೆ, ಗಂಡಸರಾಗಿ ನೀವು ತರೋಕೆ ಆಗಲಿಲ್ವಾ?' 

Shilpa D

ಬೆಳಗಾವಿ: ನಾನು ಬೆಳಗಾವಿ ರಾಜಕಾರಣ ಬದಲು ಮಾಡಬಲ್ಲೆ. ಕೊಟ್ಟ ಕುದುರೆ ಏರಲು ಆಗದವನು ಇನ್ನೊಂದು ಕುದುರೆ ಏರುತ್ತೇನೆ ಅನ್ನೋನು ವೀರನೂ ಅಲ್ಲ ಶೂರನೂ ಅಲ್ಲ ಎಂದು ಅನರ್ಹರ ವಿರುದ್ಧ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗುಡುಗಿದ್ದಾರೆ.

ಅಥಣಿ ಕ್ಷೇತ್ರದ ಕಕಮರಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಡೆದ ಪ್ರಚಾರದಲ್ಲಿ ಮಾತನಾಡಿದ ಅವರು, ಹೆಣ್ಣು ಮಗಳಾಗಿ 12 ನೂರು ಕೋಟಿ ಅನುದಾನ ತಂದಿದ್ದೇನೆ ಅಂದ್ರೆ ನೀವು ಗಂಡಸರಾಗಿ ತರೋಕೆ ಆಗಲಿಲ್ವಾ? ಇನ್ನೊಬ್ಬರು ಊಟ ಮಾಡಿದ್ದಾರೆ ಅಂತ ನಾವು ಉಪವಾಸ ಇರೋದು ತಪ್ಪು. ಇನ್ನೊಬ್ಬರ ದುಡಿದು ಊಟ ಮಾಡಿದಾರೆ ಅಂದ್ರೆ ನಾವು ದುಡಿದು ಊಟ ಮಾಡಬೇಕೆನ್ನುವುದು ಗಂಡಸ್ಥನ. ಅದನ್ನು ಬಿಟ್ಟು ಮಳ್ಳನಂಗ ಸೋಗು ಹಾಕುವುದು ಕೈ ಮುಗಿಯೋದು ಮಾಡುತ್ತಾರೆ, ಅಥಣಿ ಜನರಿಗೆ ಏನೂ ಮಾಡಲು ಆಗದಿದ್ದರೂ ಬೆಳಗಾವಿ ರಾಜಕಾರಣ ಬದಲು ಮಾಡಿ ತೋರಿಸ್ತೀನಿ ಎಂದು ಸವಾಲು ಹಾಕಿದ್ದಾರೆ.

ಮಹೇಶ ಕುಮಟಳ್ಳಿ ಮಳ್ಳ ಮಳ್ಳ ಮಂಚಕ್ಕೆ ಎಷ್ಟು ಕಾಲು ಅಂದ್ರೆ ಮೂರು ಮತ್ತೊಂದು ಅನ್ನೋವಂತಹ ಮಳ್ಳ. 2013 ಮತ್ತು 2018ರ ಚುನಾವಣೆಗೆ ಟಿಕೆಟ್ ಕೊಡಿಸಲು ನಾನೂ ಸಹಾಯ ಮಾಡಿದ್ದೆ. ಒಳ್ಳೆಯವರು, ಸುಸಂಸ್ಕೃತರು ಇದ್ದಾರೆ ಅಂದುಕೊಂಡಿದ್ದೆವು. ಆದರೆ ಅವರು ದ್ರೋಹ ಮಾಡಿದ್ದಾರೆ ಎಂದು ಕಿಡಿಕಾರಿದರು.

SCROLL FOR NEXT