ಡಿವಿ ಸದಾನಂದಗೌಡ 
ರಾಜಕೀಯ

ಇನ್ನು ಆರು ತಿಂಗಳಲ್ಲಿ ಶಿವಸೇನೆ ನಿರ್ನಾಮ: ಸದಾನಂದಗೌಡ

ಮಹಾರಾಷ್ಟ್ರದಲ್ಲಿ ನೂತನವಾಗಿ ರಚನೆಯಾಗಿರುವ ದೇವೇಂದ್ರ ಫಡ್ನವೀಸ್ ಅವರ ಸರ್ಕಾರಕ್ಕೆ ಶಿವಸೇನೆಯಿಂದ ಯಾವುದೇ ರೀತಿಯ ಬೆದರಿಕೆಯಿಲ್ಲ ಎಂದು ಕೇಂದ್ರ ಸಚಿವ  ಡಿವಿ ಸದಾನಂದಗೌಡ ಹೇಳಿದ್ದಾರೆ.

ಬೆಂಗಳೂರು: ಮಹಾರಾಷ್ಟ್ರದಲ್ಲಿ ನೂತನವಾಗಿ ರಚನೆಯಾಗಿರುವ ದೇವೇಂದ್ರ ಫಡ್ನವೀಸ್ ಅವರ ಸರ್ಕಾರಕ್ಕೆ ಶಿವಸೇನೆಯಿಂದ ಯಾವುದೇ ರೀತಿಯ ಬೆದರಿಕೆಯಿಲ್ಲ ಎಂದು ಕೇಂದ್ರ ಸಚಿವ  ಡಿವಿ ಸದಾನಂದಗೌಡ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿದ ಸದಾನಂದಗೌಡ ಮಹಾರಾಷ್ಟ್ರದಲ್ಲಿ ಮೈತ್ರಿ ಇಲ್ಲದೆ ಸ್ವತಂತ್ರ ಸ್ಪರ್ಧೆ ಮಾಡಿದ್ದರೇ ಮೂರನೇ ಎರಡರಷ್ಟು ಸ್ಪಷ್ಟ ಬಹುಮತ ಪಡೆದುಕೊಳ್ಳುತ್ತಿತ್ತು, ಆದರೆ ಹಾಗಾಲಿಲ್ಲ, ನೋಡುತ್ತಿರಿ ಇನ್ನು ಆರು ತಿಂಗಳಲ್ಲಿ, ಶಿವಸೇನೆ ನಿರ್ನಾಮವಾಗುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ.

ಮಹಾರಾಷ್ಟ್ರದಲ್ಲಿ ಎನ್​​​ಸಿಪಿ ಉತ್ತಮ ಆಡಳಿತದ ಹಿನ್ನೆಲೆಯಲ್ಲಿ ಬಿಜೆಪಿ ಜೊತೆಗೆ ಬಂದಿದೆ. ಇದನ್ನ ದೇವೇಗೌಡರು ಕೂಡ ಮನಗಾಣಬೇಕಿದೆ. ಉಪ ಚುನಾವಣೆಯಲ್ಲಿ ನಾವು 15ಕ್ಕೆ 15 ಸೀಟುಗಳಲ್ಲಿ ಗೆಲವು ಸಾಧಿಸಲಿದೆ. ಕಳೆದ 30 ವರ್ಷಗಳಿಂದ ಶಿವಸೇನೆ ನಮ್ಮೊಂದಿಗೆ ಇತ್ತು. ಆದರೆ ಶಿವಸೇನೆಗೆ ತಕ್ಷಣ ಅಧಿಕಾರದ ವ್ಯಾಮೋಹ ಬಂತು. ಹಿಂದುತ್ವ ಅನ್ನುತ್ತಿದ್ದ ಶಿವಸೇನೆ ಅದರಿಂದ ಹಿಂದಕ್ಕೆ ಸರಿಯಿತು ಎಂದರು.

ಮಾಜಿ ಪ್ರಧಾನಿ ದೇವೇಗೌಡರು, ಕುಮಾರಸ್ವಾಮಿ ಅವರು ಕಾಂಗ್ರೆಸ್ ಗಿಂತ ಬಿಜೆಪಿ ಉತ್ತಮ ಅಂತಾ ಹೇಳಿದ್ದಾರೆ. ಈಗ ಎರಡು ದಿನಗಳಿಂದ ಅವರಲ್ಲಿ ಬದಲಾವಣೆ ಆಗಿದೆ. ಈಗಾಗಲೇ ಜೆಡಿಎಸ್ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಚುನಾವಣೆ ನಡೆಯುತ್ತಿರುವ ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರಿದ್ದಾರೆ. ಕಾಂಗ್ರೆಸ್, ಜೆಡಿಎಸ್ ನಾಯಕರು ಕಂಗಾಲಾಗಿದ್ದಾರೆ ಎಂದರು.

ಕೆ ಆರ್ ನಗರ, ಹೊಸಕೋಟೆ ಮುಂತಾದ ಕ್ಷೇತ್ರಗಳನ್ನ ಸೂಕ್ಷ್ಮ ಅಂತಾ ಚುನಾವಣಾ ಆಯೋಗ ಘೋಷಣೆ ಮಾಡಬೇಕು. ಅಂತಹ ಕ್ಷೇತ್ರಗಳ ಬಗ್ಗೆ ಆಯೋಗ ವಿಶೇಷ ಗಮನ ಕೊಡಬೇಕು ಎಂದು ಕೇಂದ್ರ ಸಚಿವ ಡಿ ವಿ ಸದಾನಂದಗೌಡ ಹೇಳಿದರು. ಈಗ ಅಭಿವೃದ್ಧಿ ಅಂದರೆ ಬಿಜೆಪಿ ಅಂತಾ ಅಲ್ಲಿನ ಜನರಿಗೆ ಬಂದಿದೆ. ಹಿಂದೆಯೂ ಕೂಡ ಶಿವಸೇನೆ ನಮಗೆ ತೊಂದರೆ ಕೊಟ್ಟಿತ್ತು. ಅದನ್ನೆಲ್ಲ ನಾವು ಸಹಿಸಿಕೊಂಡು ಬಂದಿದ್ದೇವೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT