ಅರವಿಂದ್ ಲಿಂಬಾವಳಿ 
ರಾಜಕೀಯ

7ಕ್ಕಿಂತ ಕಡಿಮೆ ಕ್ಷೇತ್ರದಲ್ಲಿ ಗೆದ್ದರೆ ಮತ್ತೆ ಆಪರೇಷನ್ ಕಮಲ: ಅರವಿಂದ ಲಿಂಬಾವಳಿ ಸುಳಿವು

ವಿಧಾನಸಭಾ ಉಪಚುನಾವಣೆಯಲ್ಲಿ ಹದಿನೈದು ಕ್ಷೇತ್ರಗಳ ಪೈಕಿ ಹದಿನೈದೂ ಕ್ಷೇತ್ರಗಳನ್ನು ಗೆಲ್ಲುವ ಭರವಸೆಯಲ್ಲಿ ಬಿಜೆಪಿ ಇದೆ. ಆದರೆ 7ಕ್ಕಿಂತ ಕಡಿಮೆ ಕ್ಷೇತ್ರದಲ್ಲಿ ಬಿಜೆಪಿ ಗೆದ್ದರೆ ಸರ್ಕಾರ ಪತನವಾಗಲಿದೆ.

ಬೆಂಗಳೂರು: ವಿಧಾನಸಭಾ ಉಪಚುನಾವಣೆಯಲ್ಲಿ ಹದಿನೈದು ಕ್ಷೇತ್ರಗಳ ಪೈಕಿ ಹದಿನೈದೂ ಕ್ಷೇತ್ರಗಳನ್ನು ಗೆಲ್ಲುವ ಭರವಸೆಯಲ್ಲಿ ಬಿಜೆಪಿ ಇದೆ. ಆದರೆ 7ಕ್ಕಿಂತ ಕಡಿಮೆ ಕ್ಷೇತ್ರದಲ್ಲಿ ಬಿಜೆಪಿ ಗೆದ್ದರೆ ಸರ್ಕಾರ ಪತನವಾಗಲಿದೆ. 

ಸರ್ಕಾರ ಪತನವಾಗುವುದನ್ನು ತಡೆಯಲು ಮತ್ತೆ ಆಪರೇಷನ್ ಕಮಲ ನಡೆಸುವ ಸುಳಿವನ್ನು ಶಾಸಕ ಅರವಿಂದ ಲಿಂಬಾವಳಿ ನೀಡಿದ್ದಾರೆ.

ಯಶವಂತಪುರ ವಿಧಾನ ಉಪ ಚುನಾವಣೆ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮ ಶೇಖರ್ ಪರ ಬಂಡೆಮಠದಲ್ಲಿ ಸಮುದಾಯದ ಮುಖಂಡರ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಈ ವೇಳೆ ಜೆಡಿಎಸ್​​ನ ಕೆಲ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಫಲಿತಾಂಶ ಬಂದ ಬಳಿಕ ರಾಜಕೀಯ ಧ್ರುವೀಕರಣ ಆಗಲಿದೆ. ನಮ್ಮ ಸಂಪಕರ್ದಲ್ಲಿರುವರು ಯಾವೆಲ್ಲಾ,ಯಾರೆಲ್ಲಾ ಶಾಸಕರಿದ್ದಾರೆ? ಎಷ್ಟು ಜನ ಇದ್ದಾರೆ? ಎಂಬುದು ಚುನಾವಣೆ ಫಲಿತಾಂಶದ ಬಳಿಕ ತಿಳಿಯಲಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶವಾಸಿಗಳಿಗೆ ಗುಡ್ ನ್ಯೂಸ್: GST ಸ್ಲ್ಯಾಬ್‌ಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಎರಡೇ ತೆರಿಗೆ

207 ಮೀಟರ್ ಎತ್ತರಕ್ಕೆ ಉಕ್ಕಿದ ಯಮುನೆ; ದೆಹಲಿಯ ತಗ್ಗು ಪ್ರದೇಶ, ಮಾರುಕಟ್ಟೆಗಳು ಜಲಾವೃತ

ನಟ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರ?: ಹಾಸಿಗೆ, ದಿಂಬು ಬೇಡಿಕೆ ತೀರ್ಪು ಸೆ.9ಕ್ಕೆ ಕಾಯ್ದಿರಿಸಿದ ಕೋರ್ಟ್!

VIKRAM-32: ಭಾರತದ ಹೊಸ ಬಾಹ್ಯಾಕಾಶ ದರ್ಜೆಯ ಮೈಕ್ರೋಪ್ರೊಸೆಸರ್; Microchip ಮಹತ್ವ, ವಿಶೇಷತೆ ಏನು? ಇಲ್ಲಿದೆ ಮಾಹಿತಿ!

'DNA ಕಳ್ಳತನ' ಭೀತಿ.. ಚೀನಾದಲ್ಲಿ ಸರ್ವಾಧಿಕಾರಿ Kim Jong-un ಮುಟ್ಟಿದ ಎಲ್ಲ ವಸ್ತುಗಳ ಸ್ವಚ್ಛಗೊಳಿಸಿದ ಸಿಬ್ಬಂದಿ, ಕಾರಣ ಏನು? video

SCROLL FOR NEXT