ಕೆ.ಎಸ್. ಈಶ್ವರಪ್ಪ 
ರಾಜಕೀಯ

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಆದ ಮೈತ್ರಿ ಅಕ್ರಮ ಸಂಬಂಧದಂತೆ- ಕೆ ಎಸ್ ಈಶ್ವರಪ್ಪ

ಮಹಾರಾಷ್ಟ್ರದಲ್ಲಿ ಬಿಜೆಪಿ ಹೊರಗಿಟ್ಟು ಸರ್ಕಾರ ರಚಿಸಲು ಶಿವಸೇನೆ, ಕಾಂಗ್ರೆಸ್ ಪಕ್ಷಗಳು  ಅಕ್ರಮ ಸಂಬಂಧದ ಮೂಲಕ ಮೈತ್ರಿ ಮಾಡಿಕೊಂಡಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ   ಕೆ ಎಸ್ ಈಶ್ವರಪ್ಪ ಟೀಕಿಸಿದ್ದಾರೆ.

ಬಳ್ಳಾರಿ: ಮಹಾರಾಷ್ಟ್ರದಲ್ಲಿ ಬಿಜೆಪಿ ಹೊರಗಿಟ್ಟು ಸರ್ಕಾರ ರಚಿಸಲು ಶಿವಸೇನೆ, ಕಾಂಗ್ರೆಸ್ ಪಕ್ಷಗಳು  ಅಕ್ರಮ ಸಂಬಂಧದ ಮೂಲಕ ಮೈತ್ರಿ ಮಾಡಿಕೊಂಡಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ   ಕೆ ಎಸ್ ಈಶ್ವರಪ್ಪ ಟೀಕಿಸಿದ್ದಾರೆ.

ಮಹಾರಾಷ್ಟ್ರ ಸರ್ಕಾರ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಸ್ವಾಗತಿಸಿದ ಅವರು, ಕಾಂಗ್ರೆಸ್ ವಿಚಾರಗಳಲ್ಲಿ ಭಿನ್ನಾಭಿಪ್ರಾಯವಿದೆ. ಮೈತ್ರಿಕೂಟಕ್ಕೆ ಶಿವಸೇನೆಯನ್ನು ಸೇರಿಸಲೇ ಬಾರದಿತ್ತು. ಕಾಂಗ್ರೆಸ್ ಹಿಂದುತ್ವದ ವಿರುದ್ಧವಿತ್ತು. ಮೂಲ ಕಾಂಗ್ರೆಸ್ ನಿಲುವನ್ನು ಸಾಯುಸುವ ಮೂಲಕ ಕಾಂಗ್ರಸ್ ನಾಯಕಿ ಸೋನಿಯಾ ಗಾಂಧಿ ಅವರು ಕಾಂಗ್ರೆಸ್ ತತ್ವ ಸಿದ್ಧಾಂತಕ್ಕೆ  ತಿಲಾಂಜಲಿ‌ ಇಟ್ಟಿದ್ದಾರೆ ಎಂದು ಟೀಕಿಸಿದರು. 

ಕಾಂಗ್ರೆಸ್ ದ್ವಿಮುಖ ನೀತಿ  ತೋರುತ್ತಿದೆ. ಹೀಗಾಗಿ ಮುಸ್ಲಿಂ ಸಮುದಾಯ ಇನ್ನು‌ ಮುಂದೆ ಕಾಂಗ್ರೆಸ್ ಗೆ ಬೆಂಬಲ ನೀಡುವುದಿಲ್ಲ ಎಂದು ಈಶ್ವರಪ್ಪ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT