ಮೈಸೂರು: ವಿಧಾನಪರಿಷತ್ ಚುನಾವಣೆಗೆ ಉಚ್ಚಾಟಿತ ಜೆಡಿಎಸ್ ಎಂಎಲ್ಸಿ ಪುಟ್ಟಣ್ಣ ಬಿಜೆಪಿ ಅಭ್ಯರ್ಥಿ ಎಂದು ಸಿಎಂ ಬಿ.ಎಸ್ಯಡಿಯೂರಪ್ಪ ಘೋಷಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಪುಟ್ಟಣ್ಣ ಮೂರು ಬಾರಿ ಜೆಡಿಎಸ್ ಪ್ರತಿನಿಧಿಸಿದ್ದರು. ಪುಟ್ಟಣ್ಣ ಗೆಲ್ಲುವ ಅಭ್ಯರ್ಥಿ. ಹೀಗಾಗಿ ಅವರನ್ನೇ ಬಿಜೆಪಿ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡುತ್ತಿದ್ದೇನೆ. ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಗೆ ಪುಟ್ಟಣ್ಣ ಬಿಜೆಪಿಯಿಂದ ಸ್ಪರ್ಧೆ ಮಾಡಲಿದ್ದಾರೆ ಎಂದು ಬಿಎಸ್ವೈ ಹೇಳಿದರು.
ನಾನು ಶೀಘ್ರದಲ್ಲೆ ಬಿಜೆಪಿ ಸೇರುತ್ತೇನೆ. ಟಿಕೆಟ್ ಘೋಷಣೆ ಮಾಡಿದ್ದು ಸಂತೋಷ ತಂದಿದೆ. ನನಗೆ ಈ ಚುನಾವಣೆಯಲ್ಲಿ ಯಾವುದೇ ಫೈಟ್ ಇರುವುದಿಲ್ಲ. ನಾನು ವೈಯಕ್ತಿಕ ವರ್ಚಸ್ಸಿನಿಂದ ಮೂರು ಬಾರಿ ಗೆದ್ದಿದ್ದೇನೆ. ಜೆಡಿಎಸ್ ಬಿಟ್ಟ ಮಾತ್ರಕ್ಕೆ ಈ ಚುನಾವಣೆಯಲ್ಲಿ ಬೇರೆ ಪರಿಣಾಮ ಉಂಟಾಗಲ್ಲ. ಬಿಜೆಪಿ ಅಭ್ಯರ್ಥಿ ಆಗಿರುವುದಕ್ಕೆ ನನ್ನ ಶಕ್ತಿ ಹೆಚ್ಚಿದೆ ಎಂದು ಪುಟ್ಟಣ್ಣ ಹೇಳಿದ್ದಾರೆ.