ಎಚ್ ಡಿ ಕುಮಾರಸ್ವಾಮಿ 
ರಾಜಕೀಯ

ನಾನೇನು ತಪ್ಪು ಮಾಡಿದೆ? ಗಳಗಳನೆ ಕಣ್ಣೀರಿಟ್ಟ ಕುಮಾರಸ್ವಾಮಿ 

ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತೆ ಗಳಗಳನೇ ಕಣ್ಣೀರಿಟ್ಟ ಪ್ರಸಂಗ ಜಿಲ್ಲೆಯ ಕೆ.ಆರ್. ಪೇಟೆಯಲ್ಲಿ ನಡೆದ   ಜೆಡಿಎಸ್ ಸಮಾವೇಶದಲ್ಲಿ ನಡೆದಿದೆ.

ಮಂಡ್ಯ: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತೆ ಗಳಗಳನೇ ಕಣ್ಣೀರಿಟ್ಟ ಪ್ರಸಂಗ ಜಿಲ್ಲೆಯ ಕೆ.ಆರ್. ಪೇಟೆಯಲ್ಲಿ ನಡೆದ   ಜೆಡಿಎಸ್ ಸಮಾವೇಶದಲ್ಲಿ ನಡೆದಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ತಮ್ಮ ಪುತ್ರನ ಹೀನಾಯ ಸೋಲನ್ನು ನೆನೆದು ಕಣ್ಣೀರಿಟ್ಟಿದ್ದಾರೆ.  ಜಿಲ್ಲೆಯ ಜನರನ್ನು ನಂಬಿದೆ. ಆದರೆ, ನೀವೆ ಕೈ ಬಿಟ್ರೆ ಹೆಂಗೆ, ನಾನೇನು ತಪ್ಪು ಮಾಡಿದೆ  ಎಂದು ನೆರೆದಿದ್ದ ಪಕ್ಷದ ಕಾರ್ಯಕರ್ತರ ಬಳಿ ತಮ್ಮ ನೋವನ್ನು ತೋಡಿಕೊಂಡಿದ್ದಾರೆ.

ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಲು ನನಗೇನೂ ಆಸಕ್ತಿ ಇರಲಿಲ್ಲ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ನನ್ನಗೆ ಗಂಟು ಹಾಕಿದರು. ತಮ್ಮ ಅಧಿಕಾರವಧಿಯಲ್ಲಿ ಜಿಲ್ಲೆಯ ಅಭಿವೃದ್ದಿಗಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿರುವುದಾಗಿ ತಿಳಿಸಿದರು.

ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, 2014 ಹಾಗೂ 2018  ರಲ್ಲಿ ದೇವೇಗೌಡರ ವಿರೋಧ ಕಟ್ಟಿಕೊಂಡು ನಾರಾಯಣಗೌಡನಿಗೆ ಟಿಕೆಟ್ ಕೊಟ್ಟೆ. ಆದರೆ, ಆತ ನಂಬಿಕೆಗೆ ದ್ರೋಹ ಬಗೆದಿದ್ದಾನೆ. 2019 ಫೆಬ್ರವರಿ 18 ರಂದು ಬೆಂಗಳೂರಿನಲ್ಲಿ ಕುಳಿತು ಬಜೆಟ್ ನಲ್ಲಿ ಮಂಡ್ಯ ಜಿಲ್ಲೆಗೆ ಘೋಷಿಸಬೇಕಾದ ಕಾರ್ಯಕ್ರಮಗಳ ಬಗ್ಗೆ ಚಿಂತಿಸುತ್ತಿದ್ದರೆ ಈ ಪುಣ್ಯಾತ್ಮ ಬಾಂಬೆ ಆಸ್ಪತ್ರೆಯಲ್ಲಿ ಲಾಕ್ ಆಗಿದ್ದ. ಕುಮಾರಣ್ಣ ಕ್ಷೇತ್ರದ ಅಭಿವೃದ್ದಿಗಾಗಿ ದುಡ್ಡು ಕೊಡುತ್ತಿರಲಿಲ್ಲ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಉದಾರವಾಗಿ ದುಡ್ಡು ಕೊಡುತ್ತಿದ್ದಾರೆ ಎಂದು ಪ್ರಚಾರ ಮಾಡುತ್ತಿದ್ದಾನೆ. ಎಲ್ಲವನ್ನು ದೇವರೇ ನೋಡಿಕೊಳ್ಳಲಿ ಎಂದು ಹೇಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

Street Dog attack: ಬೀದಿ ನಾಯಿ ಸಮಸ್ಯೆಗೆ ಉಪಾಯ ಕಂಡುಕೊಂಡ ಗದಗ ಜನತೆ, ಕಾಟದಿಂದ ಮುಕ್ತಿಗೆ ಬಣ್ಣ ನೀರಿನ ಪ್ರಯೋಗ..!

ನಮ್ಮವರು ಬೇರೆ ಧರ್ಮದವರ ಪ್ರಾರ್ಥನೆ ಸ್ಥಳಗಳಿಗೆ ಹೋಗುವುದಿಲ್ಲವೇ? ಯದುವೀರ್ ಬಿಜೆಪಿ ಜೊತೆ ಸೇರಿ ಇತಿಹಾಸ ಮರೆತಿದ್ದಾರೆ: DKS

SCROLL FOR NEXT