ಯಡಿಯೂರಪ್ಪ 
ರಾಜಕೀಯ

ಮಧ್ಯಂತರ ಚುನಾವಣೆ ಇಲ್ಲವೇ ಇಲ್ಲ: ಯಡಿಯೂರಪ್ಪ ಸ್ಪಷ್ಟನೆ

ಉಪ ಚುನಾವಣೆಯಲ್ಲಿ ತಾವು ಅಧಿಕ ಸೀಟುಗಳನ್ನು ಗೆಲ್ಲಲ್ಲಿದ್ದು, ಸರ್ಕಾರ ಸುಭದ್ರವಾಗಿರುತ್ತದೆ, ಹೀಗಿರುವಾಗ ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆ ಎದುರಾಗುವುದಿಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಮೈಸೂರು: ಉಪ ಚುನಾವಣೆಯಲ್ಲಿ ತಾವು ಅಧಿಕ ಸೀಟುಗಳನ್ನು ಗೆಲ್ಲಲ್ಲಿದ್ದು, ಸರ್ಕಾರ ಸುಭದ್ರವಾಗಿರುತ್ತದೆ, ಹೀಗಿರುವಾಗ ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆ ಎದುರಾಗುವುದಿಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

 ಮೈಸೂರಿನಲ್ಲಿ  ಮಾತನಾಡಿದ ಅವರು, ರಾಜ್ಯದ ಜನತೆಗೆ ಮಧ್ಯಂತರ ಚುನಾವಣೆ ಬೇಡವಾಗಿದೆ.  ಆದರೆ ಅಧಿಕಾರ ಇಲ್ಲದೆ ಹತಾಶೆಯಿಂದ ಸಿದ್ದರಾಮಯ್ಯ ಮಧ್ಯಂತರ ಚುನಾವಣೆಯ ಮಾತನ್ನಾಡುತ್ತಿದ್ದಾರೆ.  ಆದರೆ, ಸಿದ್ದರಾಮಯ್ಯ ಇನ್ನೂ ಮೂರೂವರೆ ವರ್ಷ ವಿರೋಧ ಪಕ್ಷದ ನಾಯಕರಾಗಿಯೇ ಇರಬೇಕು. ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರುವ ಸಾಧ್ಯತೆ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸ್ಪಷ್ಟನೆ ನೀಡಿದರು. 

ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಧ್ಯಂತರ ಚುನಾವಣೆ ನಡೆಯುತ್ತದೆ ಎಂದು ನೀಡುವ ಹೇಳಿಕೆಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಉಪ ಚುನಾವಣೆಯಲ್ಲಿ 15ಕ್ಕೆ ಹದಿನೈದೂ ಕ್ಷೇತ್ರಗಳಲ್ಲೂ ಬಿಜೆಪಿಯೇ ಗೆಲ್ಲಲಿದೆ. ನಾನಿದನ್ನು ಕೇವಲ ಪ್ರಚಾರಕ್ಕಾಗಿ ಹೇಳುತ್ತಿಲ್ಲ. ಎಲ್ಲವನ್ನೂ ಅಳೆದು ತೂಗಿ ಈ ಮಾತನ್ನು ಹೇಳುತ್ತಿದ್ದೇನೆ. ಹೀಗಾಗಿ ಸಿದ್ದರಾಮಯ್ಯ ಅವರ ಮಧ್ಯಂತರ ಚುನಾವಣೆಯ ಆಸೆ ಈಡೇರುವುದಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

SCROLL FOR NEXT